ಗಂಗೊಳ್ಳಿ ಪಂಚಾಯತ್‌ನಲ್ಲಿ ಮುಸ್ಲಿಂ ಮೌಲ್ವಿಯ ಪ್ರಾರ್ಥನೆಗೆ ಆಕ್ಷೇಪ; ಶಾಸಕರ ನೇತೃತ್ವದಲ್ಲಿ ಹಿಂದೂ ಸಂಘಟನೆಗಳ ಪ್ರತಿಭಟನೆ

ಗಂಗೊಳ್ಳಿ : ಗಂಗೊಳ್ಳಿ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಮುಸ್ಲಿಂ ಮೌಲ್ವಿಯೊಬ್ಬರು ಪ್ರಾರ್ಥನೆ ನಡೆಸಿದ ವಿಡಿಯೋವನ್ನು ಹಿಂದೂ ಸಂಘಟನೆಗಳು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಅಕ್ರೋಶ ವ್ಯಕ್ತಪಡಿಸಿವೆ.

ಈ ಸಂಬಂಧ ಇಂದು ಬೈಂದೂರು ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆಯಿಂದ ಪ್ರತಿಭಟನೆ ನಡೆಯಿತು. ಪಂಚಾಯತ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಹಿಂದೂ ಸಂಘಟನೆ ಕಾರ್ಯಕರ್ತರು ಕಾಂಗ್ರೆಸ್ ಮತ್ತು ಎಸ್‌ಡಿಪಿಐ ನಡೆಯನ್ನು ಖಂಡಿಸಿದರು.

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಶಾಸಕ ಗುರುರಾಜ್ ಗಂಟಿಹೊಳೆ, ಕಾಂಗ್ರೆಸ್‌ನವರು ಅಧಿಕಾರಕ್ಕಾಗಿ ಕಾನೂನು ಬಾಹಿರ ಕೃತ್ಯ ನಡೆಸುತ್ತಿದ್ದಾರೆ. ಈ ಮೊದಲು ಎಸ್‌ಡಿಪಿಐ‌ಯನ್ನು ವಿರೋಧಿಸುತ್ತಿದ್ದ ಕಾಂಗ್ರೆಸ್ ಈಗ ಆ ಪಕ್ಷದೊಂದಿಗೆ ಕೈಜೋಡಿಸಿ ಅಧಿಕಾರಕ್ಕೆ ಬಂದಿದೆ. ಅಧಿಕಾರಕ್ಕೆ ಬಂದ ತಕ್ಷಣ ಒಟ್ಟು ವ್ಯವಸ್ಥೆಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ದೂರಿದರು.

ಇಲ್ಲಿ ಇತ್ತೀಚೆಗೆ ನಡೆದಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ – ಎಸ್‌ಡಿಪಿಐ ಅಧಿಕಾರ ಹಿಡಿದಿತ್ತು. ಈ ಹಿನ್ನೆಲೆಯಲ್ಲಿ ಪಂಚಾಯತ್ ಉಪಾಧ್ಯಕ್ಷರು ಅಧಿಕಾರ ಸ್ವೀಕರಿಸುವ ವೇಳೆ ಮುಸ್ಲಿಂ ಮೌಲ್ವಿಯಿಂದ ಪ್ರಾರ್ಥನೆ ನಡೆಸಿದ್ದರು. ಇದು ವಿವಾದವಾಗುತ್ತಿದ್ದಂತೆ ಇಂದು ಕಾಂಗ್ರೆಸ್ ಸದಸ್ಯೆ ಜಯಂತಿ ಖಾರ್ವಿ ನೇತೃತ್ವದಲ್ಲಿ ಗಣಹೋಮ ನಡೆದಿತ್ತು.

Related posts

ರಂಗನಪಲ್ಕೆಯ ಡಾ. ಬಿ. ಆರ್. ಅಂಬೇಡ್ಕರ್ ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ

1 ಕೋಟಿ ಅನುದಾನದಲ್ಲಿ ಹಿರಿಯಡಕ ಕರ್ನಾಟಕ ಪಬ್ಲಿಕ್ ಸ್ಕೂಲ್ ನೂತನ ಕಟ್ಟಡ ನಿರ್ಮಾಣ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಶಿಲಾನ್ಯಾಸ

ಬಸ್ಸು ಮಾಲಕರಿಂದ ಟೋಲ್ ಲೂಟಿ ವಿರುದ್ಧ ಪ್ರತಿಭಟನೆ