ಕಾರ್ಕಳ : ತಾಲೂಕು ಸರಕಾರಿ ಆಸ್ಪತ್ರೆ, ಇರ್ವತ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ನಿಟ್ಟೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ಎ. 18ರಂದು ತಾಲೂಕು ಉಸ್ತುವಾರಿ ನೋಡಲ್ ಅಧಿಕಾರಿ ಅಜಯ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಸೌಲಭ್ಯಗಳು, ಸಿಬ್ಬಂದಿ ವರ್ಗ, ದಾಖಲೆಗಳ ಪರಿಶೀಲನೆ ನಡೆಸಿದ ಅವರು ರೋಗಿಗಳೊಂದಿಗೆ ಮಾತನಾಡಿದರು.
ಈ ಸಂದರ್ಭ ತಹಶಿಲ್ದಾರ್ ಪ್ರದೀಪ್ ಆರ್., ತಾಲೂಕು ಆರೋಗ್ಯ ಅಧಿಕಾರಿ ಸಂದೀಪ್ ಕುಡ್ವ, ಕಂದಾಯ ನಿರೀಕ್ಷಕರು ಉಪಸ್ಥಿತರಿದ್ದರು.