ಶ್ರೀ ಕೃಷ್ಣ ಮಾಸೋತ್ಸವದ ಪ್ರಯುಕ್ತ ಭಂಡಾರಕೇರಿ ಶ್ರೀಗಳಿಂದ ಗೀತಾ ಪ್ರವಚನ ಆರಂಭ

ಉಡುಪಿ : ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಮುಂಬರುವ ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬ ಪ್ರಯುಕ್ತ ಒಂದು ತಿಂಗಳ ಕಾಲ ಆಚರಿಸಲ್ಪಡುತ್ತಿರುವ ಶ್ರೀ ಕೃಷ್ಣ ಮಾಸೋತ್ಸವದ ಅಂಗವಾಗಿ ಉಡುಪಿಯ ಮಠದಲ್ಲಿ ಚಾತುರ್ಮಾಸ್ಯದಲ್ಲಿರುವ ಭಂಡಾರಕೇರಿ ಮಠಾಧೀಶರಾದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರಿಂದ ಭಗವದ್ಗೀತೆಯ 15ನೆಯ ಅಧ್ಯಾಯದ ಪ್ರವಚನವನ್ನು ಆಯೋಜಿಸಲಾಗಿದೆ.

ಉಪನ್ಯಾಸ ಕಾರ್ಯಕ್ರಮವನ್ನು ಪರ್ಯಾಯ ಶ್ರೀ ಪುತ್ತಿಗೆ ಶ್ರೀಪಾದದ್ವಯರು ದೀಪ ಪ್ರಜ್ವಲನೆ ಮಾಡುವುದರ ಮೂಲಕ ಉದ್ಘಾಟಿಸಿದರು.

ಈ ಉಪನ್ಯಾಸವು ಅಗಸ್ಟ 17ರ ವರೆಗೆ ಪ್ರತಿನಿತ್ಯ ಸಂಜೆ 6 ಘಂಟೆಯಿಂದ ರಾಜಾಂಗಣದಲ್ಲಿ ನಡೆಯಲಿದೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ