ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜು, ಕೊಡಿಯಲ್‌ಬೈಲ್‌ನಲ್ಲಿ ಸಂಭ್ರಮದ ಓಣಂ ಆಚರಣೆ

ಮಂಗಳೂರು : ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜು, ಕೊಡಿಯಲ್‌ಬೈಲ್ ಮಂಗಳೂರು ಇಲ್ಲಿ ಓಣಂ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಎಕ್ಸ್ಪರ್ಟ್ ಶಿಕ್ಷಣ ಸಂಸ್ಥೆಯ ವಾಸ್ತುಶಿಲ್ಪಿತಜ್ಞೆಯಾದ ದೀಪಿಕಾ ಎ ನಾಯಕ್‌ರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.

ಓಣಂ ಆಚರಣೆಯ ಪ್ರಯುಕ್ತ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ವರ್ಣರಂಜಿತ ಪೂಕಳಂ ಅನ್ನು ರಚಿಸಿದರು. ಉಪನ್ಯಾಸಕರು ಪೂಕಳಂನ ಸುತ್ತ ತಿರುವಾದಿರ ನೃತ್ಯವನ್ನು ಮಾಡಿದ್ದು, ಇದು ಕಾರ್ಯಕ್ರಮಕ್ಕೆ ಇನ್ನಷ್ಟು ಮೆರಗು ತಂದಿತು.

ಈ ಸಂದರ್ಭದಲ್ಲಿ, ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರಾಮಚಂದ್ರ ಭಟ್ ಹಾಗೂ ಉಪನ್ಯಾಸಕ ವೃಂದದವರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Related posts

ಗ್ರಾಮೀಣ, ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆ : ಅರ್ಜಿ ಆಹ್ವಾನ

ಮನುಷ್ಯ ಪ್ರಕೃತಿಗೆ ಪೂರಕವಾಗಿಲ್ಲದ ಕಾರಣ ಅನಾರೋಗ್ಯಗಳು ಬಾಧಿಸುತ್ತಿವೆ : ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ

ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ನೂತನ ಪದಾಧಿಕಾರಿಗಳ ಆಯ್ಕೆ