ಉಡುಪಿ ನಗರಸಭೆ ವತಿಯಿಂದ ಕಾರ್ಯಾಚರಣೆ : ನಿಷೇಧಿತ ಪ್ಲಾಸ್ಟಿಕ್ ವಶ

ಉಡುಪಿ : ಉಡುಪಿ ನಗರಸಭೆಯ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ತಡೆಗಟ್ಟುವ ನಿಟ್ಟಿನಲ್ಲಿ ನಗರಸಭೆಯ ವತಿಯಿಂದ ನಿರಂತರ ಕಾರ್ಯಾಚರಣೆ ನಡೆಯುತ್ತಿದ್ದು, ನಗರದ ಸಿಟಿ ಬಸ್ ನಿಲ್ದಾಣ ಸಮೀಪದ ಮಾರ್ಕೆಟಿಂಗ್ ಉದ್ದಿಮೆಯೊಂದರಲ್ಲಿ 415 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ಅನ್ನು ಮಂಗಳವಾರ ವಶಕ್ಕೆ ಪಡೆದು ರೂ. 5೦೦೦ದಂಡ ವಿಧಿಸಲಾಯಿತು.

ಕಾರ್ಯಾಚರಣೆಯಲ್ಲಿ ನಗರಸಭೆಯ ಪರಿಸರ ಅಭಿಯಂತರರಾದ ಸ್ನೇಹ ಕೆ.ಎಸ್, ಪ್ರಭಾರ ಆರೋಗ್ಯ ನಿರೀಕ್ಷಕ ಸುರೇಂದ್ರ ಹೋಬಳಿದಾರ್, ಸೂಪರ್ ವೈಸರ್‌ಗಳಾದ ಭೋಜನಾಯ್ಕ್, ಸುರೇಶ್ ಶೆಟ್ಟಿ, ನಾಗರ್ಜುನ್ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.

Related posts

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ವರ್ಗಾವಣೆಗೊಳ್ಳುತ್ತಿರುವ ನ್ಯಾಯಾಧೀಶರುಗಳಿಗೆ ವಕೀಲರ ಸಂಘದಿಂದ ಬೀಳ್ಕೊಡುಗೆ

ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿ, ಸಿಬಂದಿ ಕನ್ನಡದಲ್ಲೇ ವ್ಯವಹರಿಸುವ ಕಾನೂನು ಅಗತ್ಯ – ಸಚಿವರಿಗೆ ಸಂಸದ ಕೋಟ ಪತ್ರ