ಉಡುಪಿ ನಗರಸಭೆ ವತಿಯಿಂದ ಕಾರ್ಯಾಚರಣೆ : ನಿಷೇಧಿತ ಪ್ಲಾಸ್ಟಿಕ್ ವಶ

ಉಡುಪಿ : ಉಡುಪಿ ನಗರಸಭೆಯ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ತಡೆಗಟ್ಟುವ ನಿಟ್ಟಿನಲ್ಲಿ ನಗರಸಭೆಯ ವತಿಯಿಂದ ನಿರಂತರ ಕಾರ್ಯಾಚರಣೆ ನಡೆಯುತ್ತಿದ್ದು, ನಗರದ ಸಿಟಿ ಬಸ್ ನಿಲ್ದಾಣ ಸಮೀಪದ ಮಾರ್ಕೆಟಿಂಗ್ ಉದ್ದಿಮೆಯೊಂದರಲ್ಲಿ 415 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ಅನ್ನು ಮಂಗಳವಾರ ವಶಕ್ಕೆ ಪಡೆದು ರೂ. 5೦೦೦ದಂಡ ವಿಧಿಸಲಾಯಿತು.

ಕಾರ್ಯಾಚರಣೆಯಲ್ಲಿ ನಗರಸಭೆಯ ಪರಿಸರ ಅಭಿಯಂತರರಾದ ಸ್ನೇಹ ಕೆ.ಎಸ್, ಪ್ರಭಾರ ಆರೋಗ್ಯ ನಿರೀಕ್ಷಕ ಸುರೇಂದ್ರ ಹೋಬಳಿದಾರ್, ಸೂಪರ್ ವೈಸರ್‌ಗಳಾದ ಭೋಜನಾಯ್ಕ್, ಸುರೇಶ್ ಶೆಟ್ಟಿ, ನಾಗರ್ಜುನ್ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ