ಆಪರೇಷನ್ ಸಿಂಧೂರ್ – ಹಲವು ದೇವಸ್ಥಾನಗಳಲ್ಲಿ ಪೂಜೆ

ಉಡುಪಿ : ಉಗ್ರರ ಅಡಗುತಾಣದ ಮೇಲೆ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ನಡೆಸಿದ ಕಾರ್ಯಾಚರಣೆಯನ್ನು ಶ್ಲಾಘಿಸಿ ಜಿಲ್ಲಾದ್ಯಂತ ಸಂಭ್ರಮಾಚರಣೆ ನಡೆದಿದೆ.

ದೇವಸ್ಥಾನಗಳಲ್ಲಿ ವಿಶೇಷ ಪೂಜೆಯ ಜತೆಗೆ ಮನೆ ಮನೆಗಳಲ್ಲೂ ಪೂಜೆ, ಪ್ರಾರ್ಥನೆ, ಸಿಹಿ ವಿತರಣೆ, ಸಂಘ ಸಂಸ್ಥೆಗಳಿಂದ ರಾಷ್ಟ್ರಧ್ವಜದೊಂದಿಗೆ ಮೆರವಣಿಗೆ ಹೀಗೆ ಭಾರತೀಯ ಸೇನೆಯ ಸಾಹಸಕ್ಕೆ ಇಡೀ ಜಿಲ್ಲೆ ಸಂಭ್ರಮಿಸಿದೆ. ದೇಶ ಸುರಕ್ಷಿತವಾಗಿರಲಿ, ಯೋಧರಿಗೆ ಒಳಿತಾಗಲಿ ಎಂದು ಶ್ರೀಕೃಷ್ಣ ಮುಖ್ಯಪ್ರಾಣರಲ್ಲಿ ಪ್ರಾರ್ಥಿಸಿ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಶ್ರೀ ಕೃಷ್ಣಮಠದಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಭಾರತೀಯ ಸೈನಿಕರ ಶೌರ್ಯ, ಪರಾಕ್ರಮ ಹಾಗೂ ತಾತ್ವಿಕ ನಿಷ್ಠೆಯನ್ನು ಮೆಚ್ಚಿಕೊಂಡಿದ್ದೇವೆ. ಭಾರತೀಯ ಸೇನೆಯ ಸಾಧನೆ ಅಭಿನಂದನಾರ್ಹ. ಸೈನಿಕರ ಉದ್ದೇಶ ಸಫಲವಾಗಿ ಎಲ್ಲವೂ ಶಾಂತಿಯುವಾಗಿ ನಡೆದು, ಎಲ್ಲರಿಗೂ ಶುಭವಾಗಲಿ ಮತ್ತು ದೇಶ ರಕ್ಷಣೆಯಾಗಲಿ ಎಂಬಂತೆ ಶ್ರೀ ಕೃಷ್ಣ ದೇವರಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗಿದೆ.

ಆಪರೇಷನ್ ಸಿಂದೂರ್ ಕಾರ್ಯಾಚರಣೆ ಮೂಲಕ ದೇಶದ ಹೆಮ್ಮೆ ಹಾಗೂ ಗೌರವ ಹೆಚ್ಚಿಸಿ ರುವ ಭಾರತೀಯ ಸೇನೆಯ ಸೈನಿಕರ ಶ್ರೇಯಸ್ಸಿಗಾಗಿ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ತುಪ್ಪದ ದೀಪ ಬೆಳಗಿಸಲಾಯಿತು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ