ಡಿಸೆಂಬರ್ 6ರಂದು ವಿಪಕ್ಷ ನಾಯಕ ಆರ್. ಅಶೋಕ್ ಉಡುಪಿಗೆ

ಉಡುಪಿ : ರಾಜ್ಯ ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಅವರು ಡಿಸೆಂಬರ್ 6 ಶುಕ್ರವಾರ ಬೆಳಿಗ್ಗೆ ಗಂಟೆ 10.30ಕ್ಕೆ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿಗೆ ಭೇಟಿ ನೀಡಿ, ವಕ್ಫ್ ಬೋರ್ಡ್ ಕಾನೂನಿನಡಿಯಲ್ಲಿ ರೈತರು ಹಾಗೂ ಸಾರ್ವಜನಿಕರಿಗೆ ಉದ್ಭವಿಸಬಹುದಾದ ಸಂಕಷ್ಟಗಳ ಕುರಿತು ಸಂಬಂಧಿತ ದಾಖಲೆಗಳ ಪರಿಶೀಲನೆ ನಡೆಸಲಿದ್ದಾರೆ.

ಬಳಿಕ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ಪತ್ರಿಕಾ ಗೋಷ್ಠಿ ನಡೆಸಿ, ಪಕ್ಷದ ಪ್ರಮುಖರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ