ಉಡುಪಿ ಜಿಲ್ಲೆಯಲ್ಲಿ ‘ಆರೆಂಜ್ ಅಲರ್ಟ್ – ಬಿರುಸಿನ ಮಳೆ ಸಾಧ್ಯತೆ

ಉಡುಪಿ : ಜಿಲ್ಲೆಯಲ್ಲಿ ಮಳೆ ಬಿರುಸು ಪಡೆಯುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ಕ್ರಮವಾಗಿ ಆರೆಂಜ್ ಅಲರ್ಟ್‌ ಘೋಷಿಸಿದೆ. ಇಂದು ಬೆಳಿಗ್ಗಿನಿಂದ ಜಿಲ್ಲೆಯ ಹಲವೆಡೆ ಬಿರುಸಿನ ಮಳೆಯಾಗುತ್ತಿದೆ.

ಇಂದು ಗಾಳಿಯಿಂದ ಕೂಡಿದ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್‌ ಅಲರ್ಟ್‌ ಮತ್ತು ಸೆಪ್ಟೆಂಬರ್ 1, 2ರಂದು ಎಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಗಂಟೆಗೆ 35ರಿಂದ 45 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಎಚ್ಚರಿಕೆ ವಹಿಸಬೇಕೆಂದು ಹವಾಮಾನ ಇಲಾಖೆ ತಿಳಿಸಿದೆ.

Related posts

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ವರ್ಗಾವಣೆಗೊಳ್ಳುತ್ತಿರುವ ನ್ಯಾಯಾಧೀಶರುಗಳಿಗೆ ವಕೀಲರ ಸಂಘದಿಂದ ಬೀಳ್ಕೊಡುಗೆ

ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿ, ಸಿಬಂದಿ ಕನ್ನಡದಲ್ಲೇ ವ್ಯವಹರಿಸುವ ಕಾನೂನು ಅಗತ್ಯ – ಸಚಿವರಿಗೆ ಸಂಸದ ಕೋಟ ಪತ್ರ