ಸಂಘಟಕ, ಹೊನ್ನಾಳ ಜಾಮಿಯ ಮಸೀದಿ ಕಾರ್ಯದರ್ಶಿ ಅಬ್ದುಲ್ ಖಾದಿರ್ ಸಾಹೇಬ್ ನಿಧನ

ಉಡುಪಿ : ಹೊನ್ನಾಳ ಖದೀಮ್ ಜಾಮಿಯ ಮಸೀದಿಯ ಕಾರ್ಯದರ್ಶಿ ಬಿ. ಅಬ್ದುಲ್ ಖಾದಿರ್ ಸಾಹೇಬ್ ಹೊನ್ನಾಳ(85) ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು.

ಹೊನ್ನಾಳ ಹಝ್ರತೇ ಹಜಾನಿಮಾ ರಹಮತುಲ್ಲಾಹಿ ಅಲೈಹಾ ದರ್ಗಾ ಶರೀಫ್‌ನ ಮಾಜಿ ಅಧ್ಯಕ್ಷ, ವಿವಿಧ ಸುನ್ನಿ ಸಂಘಟನೆಗಳ ನಾಯಕರಾಗಿದ್ದ ಇವರು, ವಿವಿಧ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಪರಿಸರದಲ್ಲಿ ಹಿಂದು ಮುಸ್ಲಿಂ ಭಾವೈಕ್ಯದ ಕೊಂಡಿಯಾಗಿದ್ದ ಇವರು, ಮಸೀದಿ ಮದ್ರಸಾ ದರ್ಗಾ ಹಾಗೂ ಇನ್ನಿತರ ಎಲ್ಲಾ ಸಾಮಾಜಿಕ ಎಲ್ಲಾ ಕೆಲಸಗಳಲ್ಲಿ ಮುಂಚೂಣಿಯಲ್ಲಿ ನಿಲ್ಲುತ್ತಿದ್ದರು.

ಮೃತರು ಪತ್ನಿ, ಮೂರು ಗಂಡು ಮಕ್ಕಳು ಮತ್ತು ಎರಡು ಹೆಣ್ಣು ಮಕ್ಕಳು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಜಾಮಿಯ ಮಸೀದಿಯ ಅಧ್ಯಕ್ಷ ಮುಹಮ್ಮದ್ ರಫೀಕ್ ಎಂ. ಸಂತಾಪ ವ್ಯಕ್ತಪಡಿಸಿದ್ದಾರೆ

Related posts

National Fame Award of India Books of Award – Sushanth Brahmavar

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ವರ್ಗಾವಣೆಗೊಳ್ಳುತ್ತಿರುವ ನ್ಯಾಯಾಧೀಶರುಗಳಿಗೆ ವಕೀಲರ ಸಂಘದಿಂದ ಬೀಳ್ಕೊಡುಗೆ