ಪಡುಬಿದ್ರಿ ಠಾಣಾಧಿಕಾರಿ ಪ್ರಸನ್ನ ಪಿ.ಎಸ್ ರವರಿಗೆ ಮುಖ್ಯಮಂತ್ರಿ ಪದಕ ಗೌರವ

ಪಡುಬಿದ್ರಿ : ಕರ್ನಾಟಕ ಸರಕಾರವು 2024ರ ಪ್ರತಿಷ್ಠಿತ ಮುಖ್ಯ‌ಮಂತ್ರಿ ಪದಕಕ್ಕೆ 197 ಪೋಲಿಸ್ ಅಧಿಕಾರಿಗಳನ್ನು ಘೋಷಿಸಿದ್ದು, ಪ್ರಶಸ್ತಿ ಪುರಸ್ಕೃತರಲ್ಲಿ ಪಡುಬಿದ್ರಿ ಠಾಣೆಯಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಪ್ರಸನ್ನ ಪಿ. ಎಸ್‌ರವರು ಆಯ್ಕೆ ಆಗಿದ್ದಾರೆ.

ಪೋಲಿಸ್ ಇಲಾಖೆಯಲ್ಲಿ ಅಧಿಕಾರಿಯಾಗಿ ಕಾರ್ಕಳ, ಮಂಗಳೂರು ವಿವಿಧ ಕಡೆಗಳಲ್ಲಿ ಪ್ರಾಮಾಣಿಕ ಹಾಗೂ ನಿಷ್ಠೆಯಿಂದ ದಕ್ಷ ಅಧಿಕಾರಿಯಾಗಿ ಸೇವೆಗೈದು ಪ್ರಸ್ತುತ ಪಡುಬಿದ್ರಿ ಪೋಲಿಸ್ ಠಾಣೆಯಲ್ಲಿ ಠಾಣಾಧಿಕಾರಿ ಅಗಿರುವ ಪ್ರಸನ್ನ ಪಿ.ಎಸ್ ರವರು ಕರ್ನಾಟಕ ಸರ್ಕಾರದ 2024ರ ಪ್ರತಿಷ್ಠಿತ ಮುಖ್ಯಮಂತ್ರಿ ಪದಕ ಪುರಸ್ಕೃತರಾಗಿದ್ದಾರೆ.

ಎಪ್ರಿಲ್ 2(ಬುಧವಾರ) ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

Related posts

ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ ನಿಂಬಾಳ್ಕರ್‌ಗೆ ಮುಖ್ಯಮಂತ್ರಿಗಳ ಸ್ವರ್ಣಪದಕ ಪ್ರದಾನ

ಕೋಳಿ ಅಂಕದ ವಿಚಾರ ಮತ್ತೆ ಮುನ್ನೆಲೆಗೆ; ಉಡುಪಿ ಶಾಸಕರಿಗೆ ಕಾಂಗ್ರೆಸ್ ಟಾಂಗ್!

ಸಾವಿರಾರು ರೂ. ಚಾಕಲೇಟ್ ಕದ್ದೊಯ್ದ ಚಾಕಲೇಟ್ ಕಳ್ಳರ ಕೈಚಳಕ ಸಿಸಿ ಕ್ಯಾಮೆರಾದಲ್ಲಿ ದಾಖಲು!