ತಮ್ಮ “ಅಭಿಮಾನಿ” ಸುನೀತಾ ವಿಲಿಯಮ್ಸ್‌ಗೆ ಶುಭವಾಗಲಿ ಎಂದು ಹಾರೈಸಿದ ಪರ್ಯಾಯ ಶ್ರೀಗಳು

ಉಡುಪಿ : ಸುನೀತಾ ವಿಲಿಯಮ್ಸ್ ಅವರು ಬರೋಬ್ಬರಿ 9 ತಿಂಗಳ ಬಾಹ್ಯಾಕಾಶ ವಾಸ ಮುಗಿಸಿ ಭೂಮಿಯತ್ತ ಪ್ರಯಾಣ ಬೆಳೆಸಲಿದ್ದಾರೆ. ಕೋಟಿ ಕೋಟಿ ಜನರ ಪ್ರಾರ್ಥನೆ ಹಾಗೂ ವಿಜ್ಞಾನಿಗಳ ಶ್ರಮದ ಫಲವಾಗಿ ಭೂಮಿಗೆ ವಾಪಸ್ಸಾಗುತ್ತಿದ್ದಾರೆ. ಭಾರತೀಯರು ಮಾತ್ರವಲ್ಲದೆ ಇಡೀ ವಿಶ್ವವೇ ಈ ಕ್ಷಣಕ್ಕಾಗಿ ಕಾದು ಕುಳಿತಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಉಡುಪಿಯ ಪರ್ಯಾಯ ಪುತ್ತಿಗೆ ಶ್ರೀಗಳು “ನಮ್ಮ ಅಭಿಮಾನಿಯೂ ಆಗಿರುವ ಸುನೀತಾ ವಿಲಿಯಮ್ಸ್ ಬಾಹ್ಯಾಕಾಶದಿಂದ ಭೂಮಿಗೆ ಬರುತ್ತಿದ್ದಾರೆ. ಇದು ಅತ್ಯಂತ ಖುಷಿ ಕೊಟ್ಟಿದೆ. ಅವರ ಈ ಯಾತ್ರೆ ನಿರ್ವಿಘ್ನವಾಗಿ ನಡೆಯಲಿ. ಅವರ ಸಾಧನೆ ಚಿರಸ್ಥಾಯಿಯಾಗಬೇಕು. ಅವರಿಗಾಗಿ ದೇವರಲ್ಲಿ ಪ್ರಾರ್ಥನೆ ಮಾಡುತ್ತೇವೆ” ಎಂದು ಹೇಳಿದ್ದಾರೆ.

Related posts

‘ಸಿಎಂ ಸಿದ್ರಾಮಯ್ಯನನ್ನು ಕೊಂದ್ರೆ ಹಿಂದುಗಳಿಗೆ ನೆಮ್ಮದಿ’ ಇನ್‌ಸ್ಟಾದಲ್ಲಿ ಪೋಸ್ಟ್ ಮಾಡಿದ ಸಂಪತ್ ಅರೆಸ್ಟ್

ಉಡುಪಿ ಕಡಲತೀರದಲ್ಲಿ ಪೆಹಲ್ಗಾಮ್ ಹಿಂದೂ ನರಮೇಧದ ಮೃತರ ಆತ್ಮಕ್ಕೆ ಶಾಂತಿ ಕೋರಿ ಅಪರಕ್ರಿಯೆ

ತಂದೆ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಪೆರೋಲ್‌ನಲ್ಲಿ ಉಡುಪಿಗೆ ಆಗಮಿಸಿದ ಭೂಗತ ಪಾತಕಿ ಬನ್ನಂಜೆ ರಾಜ