ಬೈಂದೂರು ಭಾಗದಲ್ಲಿ ತುಂಬಿ ಹರಿಯುತ್ತಿರುವ ನದಿಗಳಿಂದ ತೀರದ ಮನೆಗಳಲ್ಲಿ ವಾಸಿಸುವ ಜನರಿಗೆ ಸಂಪರ್ಕ ಕಡಿತ

ಬೈಂದೂರು : ಉಡುಪಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಜಾರಿಯಾಗಿದೆ, ಧಾರಾಕಾರ ಮಳೆ ಹನಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ಬೈಂದೂರು ಭಾಗದಲ್ಲಿ ನದಿಗಳು ತುಂಬಿ ಹರಿಯುತ್ತಿದ್ದು, ನದಿ ತೀರದ ಮನೆಗಳಲ್ಲಿ ವಾಸಿಸುವ ಜನರಿಗೆ ಸಂಪರ್ಕ ಕಡಿತವಾಗಿದೆ. ನದಿಯ ಪ್ರವಾಹದಿಂದಾಗಿ ಜನರು ತೊಂದರೆಯನ್ನು ಎದುರಿಸುತ್ತಿದ್ದಾರೆ.

ಉದ್ದಾಬೆಟ್ಟು, ಹಾಲಂಬೇರು, ಚಂದಣ ಭಾಗದಲ್ಲಿ ಕೃಷಿ ಭೂಮಿ ನಾಶ :

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗ್ರಾಮಗಳು ಮಳೆಯಿಂದ ತೀವ್ರವಾಗಿ ತತ್ತರಿಸಿವೆ. ಧಾರಾಕಾರ ಮಳೆಯಿಂದಾಗಿ ಉದ್ದಾಬೆಟ್ಟು, ಹಾಲಂಬೇರು, ಚಂದಣ ಭಾಗಗಳಲ್ಲಿ ಸಾವಿರಾರು ಎಕರೆ ಕೃಷಿ ಭೂಮಿ ನಾಶವಾಗಿದೆ. ಬಿತ್ತನೆ ಮಾಡಿದ ಬೆಳೆಗಳು ಹಾಳಾಗಿದ್ದು, ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.

Related posts

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ವರ್ಗಾವಣೆಗೊಳ್ಳುತ್ತಿರುವ ನ್ಯಾಯಾಧೀಶರುಗಳಿಗೆ ವಕೀಲರ ಸಂಘದಿಂದ ಬೀಳ್ಕೊಡುಗೆ

ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿ, ಸಿಬಂದಿ ಕನ್ನಡದಲ್ಲೇ ವ್ಯವಹರಿಸುವ ಕಾನೂನು ಅಗತ್ಯ – ಸಚಿವರಿಗೆ ಸಂಸದ ಕೋಟ ಪತ್ರ