ಬೈಂದೂರು ಭಾಗದಲ್ಲಿ ತುಂಬಿ ಹರಿಯುತ್ತಿರುವ ನದಿಗಳಿಂದ ತೀರದ ಮನೆಗಳಲ್ಲಿ ವಾಸಿಸುವ ಜನರಿಗೆ ಸಂಪರ್ಕ ಕಡಿತ

ಬೈಂದೂರು : ಉಡುಪಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಜಾರಿಯಾಗಿದೆ, ಧಾರಾಕಾರ ಮಳೆ ಹನಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ಬೈಂದೂರು ಭಾಗದಲ್ಲಿ ನದಿಗಳು ತುಂಬಿ ಹರಿಯುತ್ತಿದ್ದು, ನದಿ ತೀರದ ಮನೆಗಳಲ್ಲಿ ವಾಸಿಸುವ ಜನರಿಗೆ ಸಂಪರ್ಕ ಕಡಿತವಾಗಿದೆ. ನದಿಯ ಪ್ರವಾಹದಿಂದಾಗಿ ಜನರು ತೊಂದರೆಯನ್ನು ಎದುರಿಸುತ್ತಿದ್ದಾರೆ.

ಉದ್ದಾಬೆಟ್ಟು, ಹಾಲಂಬೇರು, ಚಂದಣ ಭಾಗದಲ್ಲಿ ಕೃಷಿ ಭೂಮಿ ನಾಶ :

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗ್ರಾಮಗಳು ಮಳೆಯಿಂದ ತೀವ್ರವಾಗಿ ತತ್ತರಿಸಿವೆ. ಧಾರಾಕಾರ ಮಳೆಯಿಂದಾಗಿ ಉದ್ದಾಬೆಟ್ಟು, ಹಾಲಂಬೇರು, ಚಂದಣ ಭಾಗಗಳಲ್ಲಿ ಸಾವಿರಾರು ಎಕರೆ ಕೃಷಿ ಭೂಮಿ ನಾಶವಾಗಿದೆ. ಬಿತ್ತನೆ ಮಾಡಿದ ಬೆಳೆಗಳು ಹಾಳಾಗಿದ್ದು, ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ