ಭೀಕರ ಅಪಘಾತಕ್ಕೆ ಸುಳ್ಯದ ವ್ಯಕ್ತಿ ಬಲಿ…!

ಕಾಸರಗೋಡು : ಸುಳ್ಯ – ಕಾಸರಗೋಡು ರಸ್ತೆಯ ಕುಂಟಾರು – ಮುರೂರು ಮಧ್ಯೆ ಓಮ್ನಿ ಕಾರು ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟ ಘಟನೆ ಡಿ. 10ರ ಮಂಗಳವಾರ ನಡೆದಿದೆ.

ಮೃತ ದುರ್ದೈವಿಯನ್ನು ಸುಳ್ಯದ ಅಜ್ಜಾವರ ಕರ್ಲಪ್ಪಾಡಿ ನಿವಾಸಿ ಮಹಮ್ಮದ್ ಕುಂಞಿ ಎಂದು ಗುರುತಿಸಲಾಗಿದೆ.

ಅವರು ತನ್ನ ಮಗನನ್ನು ಕಾಸರಗೋಡಿಗೆ ಬಿಟ್ಟು ಬರುತ್ತಿದ್ದಾಗ ಕುಂಟಾರು ಕಳೆದು – ಮೂರೂರು ಸಮೀಪ ತಲುಪುತ್ತಿದ್ದಂತೆ ಕುಂಟಾರಿನ ಲಾರಿಯೊಂದು ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಓಮ್ನಿ ಕಾರು ನಜ್ಜುಗುಜ್ಜಾಗಿದ್ದು ಚಾಲಕ ಮಹಮ್ಮದ್ ಕುಂಞಿ ಆಸ್ಪತ್ರೆಗೆ ಕರೆತರುವ ವೇಳೆ ಮೃತಪಟ್ಟಿದ್ದಾರೆ.

Related posts

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ಪೊಲೀಸ್ ವೃತ್ತ ನಿರೀಕ್ಷಕ ನಂಜಪ್ಪ ಎನ್ ನಿಧನ; ಸರಕಾರಿ ಗೌರವಗಳೊಂದಿಗೆ ಅಂತಿಮ ನಮನ

ಚೂರಿಯಿಂದ ಇರಿದು ವ್ಯಕ್ತಿಯ ಕೊಲೆ, ಇಬ್ಬರು ಪುತ್ರರಿಗೆ ಗಾಯ; ಆರೋಪಿ ಅರೆಸ್ಟ್