ಕೊರಗ ಸಂಘಗಳ ಒಕ್ಕೂಟದಿಂದ ತಹಶೀಲ್ದಾರ್‌ಗೆ ಮನವಿ

ಕಾರ್ಕಳ : ಕೊರಗ ಸಂಘಗಳ ಒಕ್ಕೂಟವು ಸಮುದಾಯದ ಪ್ರಮುಖ ಬೇಡಿಕೆಯಾದ ಭೂಮಿಯ ಕುರಿತು ಮನವಿಯನ್ನು ಕಾರ್ಕಳ ತಾಲೂಕು ತಹಶೀಲ್ದಾರ್‌ಗೆ ಸಲ್ಲಿಸಿವೆ.

ಕಾರ್ಕಳದ ಬಂಡಿಮಠದಲ್ಲಿರುವ ಹದಿಮೂರು ಕುಟುಂಬಗಳ ನಿವೇಶನ ಹಕ್ಕುಪತ್ರಕ್ಕಾಗಿ ಮನವಿ ನೀಡಿ ದರ್ಕಾಸು ಭೂಮಿ ಅರ್ಜಿಗಳ ವಿಷಯವಾಗಿ ತಹಶೀಲ್ದಾರರೊಂದಿಗೆ ಮಾತುಕತೆ ನಡೆಸಲಾಯಿತು. ಜನವರಿ ನಾಲ್ಕರಂದು ಇಲಾಖೆಯ ವತಿ‌ಯಿಂದ ನಡೆಸುವ ಅಕ್ರಮ ಸಕ್ರಮ ಸಭೆಯಲ್ಲಿ ಕೊರಗರ ಅರ್ಜಿಗಳನ್ನು ವಿಶೇಷವಾಗಿ ಪರಿಗಣಿಸಿ ಸಮಸ್ಯೆಗಳನ್ನು ಪರಿಹರಿಸುವುದಾಗಿ ತಹಶೀಲ್ದಾರ್ ಅವರು ನಿಯೋಗಕ್ಕೆ ಭರವಸೆ ನೀಡಿದರು.

ಮುಂದಿನ ಕೆಲವು ದಿನಗಳಲ್ಲಿ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪ್ರತ್ಯೇಕ ಸಭೆ ನಡೆಸಿ, ಕೊರಗರ ಕೆಲವು ಬೇಡಿಕೆಗಳನ್ನು ಪರಿಹರಿಸಲಾಗುವುದು ಎಂದು ತಿಳಿಸಿದರು. ಮನವಿ ಸಲ್ಲಿಸಿದ ನಿಯೋಗದಲ್ಲಿ ಒಕ್ಕೂಟದ ಪುತ್ರನ್ ಹೆಬ್ರಿ, ನರಸಿಂಹ ಪೆರ್ಡೂರು, ಶೇಖರ ಕೆಂಜೂರು, ಅಮರ ಪಳ್ಳಿ ಹಾಗೂ ಕಾರ್ಕಳ ಬಂಡಿಮಠದ ಸುನಂದಾ, ಲೀಲಾ, ಲಲಿತಾ, ಚಂದ್ರಾವತಿ, ಶಕುಂತಲಾ, ಗಣೇಶ್, ವಸಂತ, ಪ್ರಸಾದ್, ಶಶಿಕಲಾ ನಕ್ರೆ, ಅಕ್ಕು ತೆಳ್ತಾರ್ ಮತ್ತು ಇತರರು ಉಪಸ್ಥಿತರಿದ್ದರು.

Related posts

ಮೂಡಲಪಾಯ ಯಕ್ಷಗಾನದ ಅಭ್ಯುದಯವನ್ನು ಬೆಂಬಲಿಸಲು ಅಕಾಡೆಮಿ ಬದ್ಧವಾಗಿದೆ : ಡಾ. ತಲ್ಲೂರು

National Fame Award of India Books of Award – Sushanth Brahmavar

ಕರವೇ ಕಾಪು ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ