ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಿಂದ ಇದು ತುಘಲಕ್ ಸರಕಾರ ಎನ್ನುವುದು ಸಾಬೀತಾಗಿದೆ – ಸುನಿಲ್ ಕುಮಾರ್

ಉಡುಪಿ : ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಿಂದ ಇದು ತುಘಲಕ್ ಸರಕಾರ ಎನ್ನುವುದು ಸಾಬೀತಾಗಿದೆ ಅಂತ ಮಾಜಿ ಸಚಿವ ಸುನಿಲ್ ಕುಮಾರ್ ಆಕ್ರೋಶ ಹೊರಹಾಕಿದ್ದಾರೆ.

ಚುನಾವಣೆ ಮುಗಿದು 10 ದಿನ ಕಳೆಯಲಿಲ್ಲ, ಈಗ ಬೆಲೆ ಏರಿಕೆ ಮಾಡಿದ್ದಾರೆ. ಚುನಾವಣೆಗೂ ಮುನ್ನ ಎಲ್ಲ ಯೋಜನೆಗಳನ್ನು ರದ್ದು ಮಾಡಿ ಗ್ಯಾರಂಟಿ ಜಪ ಮಾಡುತ್ತಿದ್ದ ಸರಕಾರ ಫಲಿತಾಂಶ ಬಂದ ಬಳಿಕ ಏಕಾಏಕಿ ತೆರಿಗೆ ಹೆಚ್ಚಳ ಮಾಡಿದೆ.

ಪೆಟ್ರೋಲ್ ಡೀಸೆಲ್ ಬೆಲೆಯಲ್ಲಿ ಮೂರು ಮೂರೂವರೆ ರೂ.ಹೆಚ್ಚಳ ಮಾಡಿದೆ. ಹಾಲಿಗೆ ಸಬ್ಸಿಡಿ ಇಲ್ಲ, ಕಂದಾಯ ಇಲಾಖೆ ಕಾಗದ ಪತ್ರಗಳ ದರವೂ ಹೆಚ್ಚಳ ಮಾಡಲಾಗಿದೆ. ಇಂಜಿನಿಯರಿಂಗ್, ಮೆಡಿಕಲ್ ಕಾಲೇಜು ಫೀಸ್ ಹೆಚ್ಚಳವಾಗಿದೆ. ಈಗ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಏರಿಕೆ ಮಾಡಿ ಖಜಾನೆ ತುಂಬಿಸುವ ಕಾರ್ಯ ಆರಂಭ ಮಾಡಿದ್ದಾರೆ. 13000 ಕೋಟಿ ರೂ. ತೆರಿಗೆ ಸಂಗ್ರಹದಲ್ಲಿ ಕಡಿಮೆಯಾಗಿದ್ದು ಇದು ರಾಜ್ಯ ಸರ್ಕಾರದ ಆಡಳಿತ ವೈಖರಿಗೆ ಇದು ಸಾಕ್ಷಿ. ನಾಳೆಯಿಂದಲೇ ಬಿಜೆಪಿ ಹೋರಾಟ ಆರಂಭಸಲಿದೆ. ತಕ್ಷಣ ಸರಕಾರ ಬೆಲೆ ಏರಿಕೆಯನ್ನು ವಾಪಸ್ ಪಡೆಯಬೇಕು ಎಂದವರು ಒತ್ತಾಯ ಮಾಡಿದ್ದಾರೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ