ಅಣ್ಣನ ಉತ್ತರ ಕ್ರಿಯೆಯ ಸಿದ್ಧತೆ – ವಿದ್ಯುತ್‌ ಪ್ರವಹಿಸಿದ್ದ ಶಾಮಿಯಾನ ಕಂಬ ಸ್ಪರ್ಶಿಸಿ ತಂಗಿ ಸಾವು

ಕಾರ್ಕಳ : ಅಣ್ಣನ ಉತ್ತರ ಕ್ರಿಯೆ ಸಿದ್ಧತೆ ವೇಳೆ ವಿದ್ಯುತ್‌ ಪ್ರವಹಿಸುತ್ತಿದ್ದ ಶಾಮಿಯಾನ ಕಂಬ ಸ್ಪರ್ಶಿಸಿ ತಂಗಿ ಸಾವಿಗೀಡಾದ ದಾರುಣ ಘಟನೆ ಕಾರ್ಕಳ ತಾಲೂಕು ನಿಟ್ಟೆಯಲ್ಲಿ ಸಂಭವಿಸಿದೆ.

ನಿಟ್ಟೆ ಗ್ರಾಮದ ರಾಘು ಬೋಂಟ್ರ ಎಂಬವರು ನವೆಂಬರ್ 3ರಂದು ನಿಧನರಾಗಿದ್ದು, ಮೃತರ ಸದ್ಗತಿಗಾಗಿ ನ. 15ಕ್ಕೆ ಉತ್ತರ ಕ್ರಿಯೆ ನಿಗದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಸಿದ್ಧತೆ ನಡೆದಿದ್ದು ಗುರುವಾರ ರಾತ್ರಿ 9 ಗಂಟೆ ವೇಳೆಗೆ ರಾಘು ಬೋಂಟ್ರ ಅವರ ತಂಗಿ ಲಲಿತಾ (59) ಶಾಮಿಯಾನದ ಆಧಾರಕ್ಕೆಂದು ಅಳವಡಿಸಿದ್ದ ಕಂಬ ಸ್ಪರ್ಶಿಸಿದ್ದರು. ಆ ಕಂಬದಲ್ಲಿ ವಿದ್ಯುತ್‌ ಪ್ರವಹಿಸಿದ್ದ ಪರಿಣಾಮ ವಿದ್ಯುತ್‌ ಆಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ. ಲಲಿತಾ ಅವರು ನಿಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಕ್ಷರ ದಾಸೋಹ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತರು ಓರ್ವ ಪುತ್ರನನ್ನು ಅಗಲಿದ್ದಾರೆ.

ಅವಘಡದ ಹಿನ್ನೆಲೆಯಲ್ಲಿ ಬೋಂಟ್ರಮನೆಯಲ್ಲಿ ನಿಗದಿಯಾಗಿದ್ದ ಉತ್ತರ ಕ್ರಿಯೆಯನ್ನು ಮುಂದೂಡಲಾಗಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

Related posts

ಅಣ್ಣನಿಂದ ಲಕ್ಷಾಂತರ ರೂ. ಚಿನ್ನ ಪಡೆದು ತಂಗಿಯಿಂದಲೇ ವಂಚನೆ

ಬೆಳಕು ಮೀನುಗಾರಿಕೆ ಹಾಗೂ ಬುಲ್‌ಟ್ರಾಲ್ ಮೀನುಗಾರಿಕೆ ನಿಷೇಧ – ಉಲ್ಲಂಘಿಸಿದರೆ ಕಠಿಣ ಕ್ರಮ

ಮಾ.31ರಂದು ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ