ಕರ್ನಾಟಕ ಪ್ರೆಸ್ ಕ್ಲಬ್ ಉಡುಪಿ ವತಿಯಿಂದ ಪತ್ರಿಕಾ ದಿನಾಚರಣೆ

ಉಡುಪಿ : ಕರ್ನಾಟಕ ಪ್ರೆಸ್ ಕ್ಲಬ್ ಉಡುಪಿ ವತಿಯಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಹೋಟೆಲ್ ಮಥುರಾ ಕಂಫರ್ಟ್ಸ್ ಸಭಾಂಗಣದಲ್ಲಿ ಇಂದು ನಡೆಯಿತು.

ಕಾರ್ಯಕ್ರಮವನ್ನು ಎಂಜಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಸುಚಿತ್ ಕೋಟ್ಯಾನ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು

ಬಳಿಕ ಮಾತನಾಡಿದ ಅವರು ಕನ್ನಡದ ಮೊದಲ ಪತ್ರಿಕೆ ಮಂಗಳೂರು ಸಮಾಚಾರ ಆರಂಭಗೊಂಡ ದಿನವನ್ನು ಪತ್ರಿಕಾ ದಿನವನ್ನಾಗಿ ರಾಜ್ಯಾದ್ಯಂತ ಆಚರಿಸಲಾಗುತ್ತಿದೆ. ರೆವರೆಂಡ್ ಹರ್ಮನ್ ಮೊಗ್ಲಿoಗ್ ಅವರು 1843 ಜುಲೈ 1 ರಂದು ಮಂಗಳೂರು ಸಮಾಚಾರ ಪತ್ರಿಕೆಯನ್ನು ಆರಂಭಿಸಿದರು. ಕನ್ನಡ ಪತ್ರಿಕೋದ್ಯಮದ ಚರಿತ್ರೆ ಆರಂಭವಾಗಿರುವುದು ತುಳುನಾಡಿನ ಮಂಗಳೂರಿನಲ್ಲಿ ಇದು ನಮಗೆಲ್ಲರಿಗೂ ಹೆಮ್ಮೆಯ ವಿಚಾರ. ಸರಿ ತಪ್ಪಿನ ಗೆರೆ ಬಹಳ ಬೇಗನೆ ಅಳಿಸಿ ಹೋಗುತ್ತದೆ. ಮಾಧ್ಯಮಗಳಲ್ಲಿ ಪ್ರಸಾರವಾಗುವ ಸುದ್ದಿಗಳನ್ನು ಜನ ಹೇಗೆ ನೋಡುತ್ತಾರೆ ಎಂಬುದೇ ಪ್ರಶ್ನೆ ಇದೇ ವರದಿಗಾರರಿಗೆ ಇರುವಂತಹ ದೊಡ್ಡ ಸವಾಲು ಎಂದರು. ಕರ್ನಾಟಕ ಪ್ರೆಸ್ ಕ್ಲಬ್ ನ ನೂತನ ಸದಸ್ಯರಿಗೆ ಐಡಿ ಕಾರ್ಡ್ ವಿತರಿಸಿ ಮಾಧ್ಯಮ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆ ಮಾಡಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಪ್ರೆಸ್ ಕ್ಲಬ್ ಉಡುಪಿ ಸಂಘದ ಅಧ್ಯಕ್ಷ ಸುರೇಶ್ ಶೆಟ್ಟಿ ವಹಿಸಿದ್ದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಸಂಚಾಲಕ ರೂಪೇಶ್ ಕಲ್ಮಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ಜೊತೆ ಕಾರ್ಯದರ್ಶಿ ಅನಿಲ್ ಆಳ್ವ ಖಜಾಂಚಿ ರಿತೇಶ್ ಕುಮಾರ್ ಸದಸ್ಯರಾದ ಸ್ಟೀವನ್, ನಂದಕುಮಾರ್, ಅನುಷಾ, ಮೊದಲಾದವರು ಉಪಸ್ಥಿರಿದ್ದರು.

ಕರ್ನಾಟಕ ಕ್ಲಬ್ ನ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಸ್ವಾಗತಿಸಿ, ಮಾಲತಿ ಆಚಾರ್ಯ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related posts

ಮೂಡಲಪಾಯ ಯಕ್ಷಗಾನದ ಅಭ್ಯುದಯವನ್ನು ಬೆಂಬಲಿಸಲು ಅಕಾಡೆಮಿ ಬದ್ಧವಾಗಿದೆ : ಡಾ. ತಲ್ಲೂರು

National Fame Award of India Books of Award – Sushanth Brahmavar

ಕರವೇ ಕಾಪು ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ