ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿಗೆ ಇನ್ನೊಂದು ಖಾಸಗಿ ಬಸ್ ಡಿಕ್ಕಿ : ಪ್ರಯಾಣಿಕರಿಗೆ ಗಾಯ

ಕುಂದಾಪುರ : ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿಗೆ ಇನ್ನೊಂದು ಖಾಸಗಿ ಬಸ್ಸು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಸುಮಾರು 8 ಕ್ಕೂ ಮಿಕ್ಕಿ ಪ್ರಯಾಣಿಕರು ಗಾಯಗೊಂಡ ಘಟನೆ ಹೆಮ್ಮಾಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ರಾತ್ರಿ ನಡೆದಿದೆ.

ಭಟ್ಕಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್ಸನ್ನು ಚಾಲಕ ಹೆಮ್ಮಾಡಿ ಗ್ರಾಮದ ಕಾಶೀ ಮಠದ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ನಿಲ್ಲಿಸಿದಾಗ ಅದೇ ಮಾರ್ಗವಾಗಿ ಬೆಂಗಳೂರಿಗೆ ಹೋಗುತ್ತಿದ್ದ ಇನ್ನೊಂದು ಖಾಸಗಿ ಬಸ್ ನಿಂತಿದ್ದ ಬಸ್ಸಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ಸಿನ ಚಾಲಕ ಕಿರಣ, ಕಂಡಕ್ಟರ್ ರಾಜು, ಪ್ರಯಾಣಿಕರಾದ ರೇವತಿ, ಜಾನು, ಚೇತನಾ, ಪ್ರತ್ಯುಷಾ, ಲಾವಣ್ಯ ಸಿಂಗ್ ಎಂಬವರಿಗೆ ಗಂಭೀರ ಗಾಯಗಳಾಗಿವೆ.

ಗಾಯಾಳು ಪ್ರಯಾಣಿಕರನ್ನು ಸ್ಥಳೀಯ ರಿಕ್ಷಾ ಚಾಲಕರು ಹಾಗೂ ಸಾರ್ವಜನಿಕರು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ.

ಈ ಕುರಿತು ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮೂಡಲಪಾಯ ಯಕ್ಷಗಾನದ ಅಭ್ಯುದಯವನ್ನು ಬೆಂಬಲಿಸಲು ಅಕಾಡೆಮಿ ಬದ್ಧವಾಗಿದೆ : ಡಾ. ತಲ್ಲೂರು

ಕರವೇ ಕಾಪು ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ