ಕಂಟೈನರ್‌ಗೆ ಖಾಸಗಿ ಬಸ್ ಢಿಕ್ಕಿ – 20 ಮಂದಿಗೆ ಗಾಯ

ಪಡುಬಿದ್ರಿ : ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಕಂಟೈನರ್‌ಗೆ ಖಾಸಗಿ ಬಸ್ಸೊಂದು ಢಿಕ್ಕಿಯಾದ ಪರಿಣಾಮ ಬಸ್ಸಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 20 ಮಂದಿಗೆ ಗಾಯಗಳಾಗಿವೆ. ಓರ್ವರಿಗೆ ಮೂಳೆ ಮುರಿತವುಂಟಾಗಿದ್ದು ಎಲ್ಲರೂ ಮುಕ್ಕದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಹೆಜಮಾಡಿಯ ಬಿಟ್ಟು ದಾಭಾದೆದುರಿನ ರಾಷ್ಟ್ರೀಯ ಹೆದ್ದಾರಿ 66ರ ತಿರುವೊಂದರಲ್ಲಿ ಈ ಅಪಘಾತವು ಸಂಭವಿಸಿದೆ.

ಗಾಯಾಳುಗಳನ್ನು ಭವಾನಿ, ಅಮೀನಾ, ಫಾತೀಮಾ, ಸಿಯಾ, ಸಚಿನ್‌, ಸನತ್‌ ಕುಮಾರ್‌, ಸಚಿನ್‌ ಎ., ಪೌಲ್‌, ಮಾತುಮ್‌, ಆನಂದ ಪ್ರಭು, ನಸೀಮ್‌ ಶೇಖ್‌, ಅಶೋಕ್‌, ನಂದನ, ಬಸ್‌ ಚಾಲಕ ವಿಕ್ರಮ್‌, ಸಿದ್ದು, ಅಮಿತ್‌, ಶಕುಂತಳಾ, ಪ್ರದೀಪ್‌, ಸುಮತಿ, ಈಶ್ವರಮೂರ್ತಿ ಎಂದು ಗುರುತಿಸಲಾಗಿದೆ. ಕಂಟೈನರ್‌ ಲಾರಿ ಚಾಲಕನು ಯಾವುದೇ ಮುನ್ಸೂಚನೆಗಳಿಲ್ಲದೇ ನಿಲ್ಲಿಸಿದಾಗ ಈ ಘಟನೆಯು ಸಂಭವಿಸಿದೆ. ಕಂಟೈನರ್‌ ಚಾಲಕನ ವಿರುದ್ಧ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

Worlds Fastest Bhagvad Gita Writer Completing 18 Chapters & 700 Verses in Just 5.30 Hours

ಮೀನುಗಾರರ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ-ಹಿಂದೂ ಯುವಸೇನೆ ಮುಖಂಡನ ವಿರುದ್ಧ ಸುಮೊಟೋ ಕೇಸ್