ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನಿರ್ಮಾಪಕಿ ಏಕ್ತಾ ಕಪೂರ್ ಭೇಟಿ

ಮಂಗಳೂರು : ಬಾಲಿವುಡ್ ನಿರ್ದೇಶಕಿ ಕಮ್ ನಿರ್ಮಾಪಕಿ ಏಕ್ತಾ ಕಪೂರ್ ಮಂಗಳೂರಿನ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ಕುಟುಂಬದ ಜೊತೆ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಆಗಮಿಸಿ ಅಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮೊದಲ ಬಾರಿಗೆ ಭೇಟಿ ನೀಡಿರುವ ಏಕ್ತಾ ಕಪೂರ್, ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಕೆಲ ಸಮಯ ದೇವಸ್ಥಾನದಲ್ಲಿ ಕುಟುಂಬದ ಜೊತೆ ಸಮಯ ಕಳೆದಿದ್ದಾರೆ. ಬಳಿಕ ದೇವಸ್ಥಾನದಲ್ಲಿ ಅವರಿಗೆ ದೇವರ ವಿಶೇಷ ವಸ್ತ್ರ ನೀಡಿ ಗೌರವಿದ್ದಾರೆ.

ಬಳಿಕ ಶಿಬರೂರು ಕೊಡಮಣಿತ್ತಾಯ ದೈವಸ್ಥಾನಕ್ಕೆ ಏಕ್ತಾ ಕಪೂರ್ ಕುಟುಂಬ ಭೇಟಿ ಕೊಟ್ಟಿದ್ದಾರೆ.

ಏಕ್ತ ಕಪೂರ್ ಹಿಂದಿ ಸಿನಿಮಾರಂಗದಲ್ಲಿ ಸೀರಿಯಲ್ ಮತ್ತು ಸಿನಿಮಾ ನಿರ್ಮಾಪಕಿಯಾಗಿ ಗುರುತಿಸಿಕೊಂಡಿದ್ದಾರೆ. ಏಕ್ ವಿಲನ್, ಬಿಗ್ ಬಿ ಮತ್ತು ರಶ್ಮಿಕಾ ನಟನೆಯ ‘ಗುಡ್ ಬೈ’ ಸಿನಿಮಾ, ಯೂ ಟರ್ನ್ ಚಿತ್ರ ಸೇರಿದಂತೆ ಸಾಕಷ್ಟು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ.

Related posts

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ

National Fame Award of India Books of Award – Sushanth Brahmavar

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ