ಪ್ರಗತಿಪರ ಕೃಷಿಕನ ಕಡಿದು ಕೊಲೆ

ಮಂಗಳೂರು : ಭೂ ವಿವಾದಕ್ಕೆ ಸಂಬಂಧಿಸಿದಂತೆ ಪ್ರಗತಿಪರ ಕೃಷಿಕರೊಬ್ಬರನ್ನು ಕತ್ತಿಯಿಂದ ಕಡಿದು ಕೊಲೆಗೈದಿರುವ ಘಟನೆ ಗೋಳಿತೊಟ್ಟು ಸಮೀಪದ ಆಲಂತಾಯದ ಪೆರ್ಲ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಪೆರ್ಲ ನಿವಾಸಿ, ಪ್ರಗತಿಪರ ಕೃಷಿಕ ರಮೇಶ್ ಗೌಡ (50) ಕೊಲೆಯಾದ ದುರ್ದೈವಿ.

ರಮೇಶ್ ಗೌಡರನ್ನು ಅವರ ಹತ್ತಿರದ ಸಂಬಂಧಿ ಹರೀಶ್ ಎಂಬಾತ ಕತ್ತಿಯಿಂದ ಕಡಿದು ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಉಪ್ಪಿನಂಗಡಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ