ರಾಜ್ಯಪಾಲರ ನಡೆಯ ವಿರುದ್ಧ ಸಹಬಾಳ್ವೆ ಸಂಘಟನೆಯಿಂದ ಪ್ರತಿಭಟನೆ

ಉಡುಪಿ : ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಮುಡಾ ಪ್ರಕರಣದಲ್ಲಿ ಖಾಸಗಿ ವ್ಯಕ್ತಿಗಳ ದೂರಿನ ಅನ್ವಯ ಪ್ರಾಸಿಕ್ಯೂಷನ್’ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಉಡುಪಿಯ ಜಿಲ್ಲಾಧಿಕಾರಿ ಕಚೇರಿ ಬಳಿ ಸಹಬಾಳ್ವೆ ಸಂಘಟನೆ ವತಿಯಿಂದ ಪ್ರತಿಭಟನೆ ಹಮ್ಮಿಕೊಂಡಿತ್ತು.

ಈ ಸಂದರ್ಭದಲ್ಲಿ ಸಹಬಾಳ್ವೆ ಸಂಘಟನೆಯ ಸಂಚಾಲಕ ಪ್ರೊ. ಫಣಿರಾಜ್ ಮಾತನಾಡಿ, ” ಈ ಪ್ರತಿಭಟನೆಯು ಆಡಳಿತ ಸರ್ಕಾರದ ಪರವಾಗಿ ಅಲ್ಲ. ಬದಲಾಗಿ ಪ್ರಜಾಪ್ರಭುತ್ವವನ್ನು ಅಸ್ಥಿರವಾಗಿಸಲು ನಡೆಯುತ್ತಿರುವ ಹುನ್ನಾರದ ವಿರುದ್ಧವಾಗಿದೆ” ಎಂದರು.

“2020ರಲ್ಲಿ ನಡೆದಿದೆ ಎನ್ನಲಾದ ಮುಡಾ ಹಗರಣದ ಕುರಿತು ರಾಜ್ಯಪಾಲರು ಪ್ರಾಸಿಕ್ಯೂಷನ್’ಗೆ ಅನುಮತಿ ನೀಡಿದ್ದಾರೆ. ಆ ಸಂದರ್ಭದಲ್ಲಿ ಸಿದ್ದರಾಮಯ್ಯ ರಾಜ್ಯದ ಮುಖ್ಯಮಂತ್ರಿಯೇ ಆಗಿರಲಿಲ್ಲ. ಅಧಿಕಾರದಲ್ಲಿ ಇಲ್ಲದಾಗ ಹಗರಣ ನಡೆದಿದೆ ಎನ್ನುವುದನ್ನು ರಾಜ್ಯಪಾಲರು ನಂಬುವುದು ಹಾಸ್ಯಾಸ್ಪದ” ಎಂದು ಹೇಳಿದರು.

ಈ ಸಂದರ್ಭದಲ್ಲಿ ವೆರೋನಿಕಾ ಕರ್ನೆಲಿಯೋ, ಯಾಸೀನ್ ಮಲ್ಪೆ, ಸುಂದರ್ ಮಾಸ್ತರ್, ಪ್ರಸಾದ್ ಕಾಂಚನ್, ಪ್ರಶಾಂತ್ ಜತ್ತನ್,ಅಝೀಜ್ ಉದ್ಯಾವರ, ಅಶ್ಫಾಕ್ ಕಾರ್ಕಳ, ಇಸ್ಮಾಯಿಲ್ ಕಿದೆವರ್, ಜಾಬೀರ್ ಖತೀಬ್ ಮುಹಮ್ಮದ್ ಗೌಸ್ ಕಾರ್ಕಳ, ಹುಸೇನ್ ಕೋಡಿಬೆಂಗ್ರೆ ಮತ್ತು ಮಂಜುನಾಥ್ ಗಿಳಿಯಾರ್ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ