ಹಂಪ್ಸ್ ದುರಸ್ಥಿಗಾಗಿ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ

ಕುಂದಾಪುರ : ಕುಂದಾಪುರ ನಗರದ ದೇವಸ್ಥಾನವೊಂದರ ರಥೋತ್ಸವದ ನಿಮಿತ್ತ ಕುಂದಾಪುರ ಪುರಸಭೆಯ ಅನುಮತಿಯೊಂದಿಗೆ ರಥದ ಸುಗಮ ಚಲನೆಗಾಗಿ ನರದೆಲ್ಲೆಡೆ ಹಂಪನ್ನು ಅರಬರೆ ಕೀಳಲಾಗಿದ್ದು ಕಳೆದ 6 ತಿಂಗಳಿನಿಂದ ಪುರಸಭೆಯವರು ಹಂಪ್‌ ದುರಸ್ತಿಯ ಬಗ್ಗೆ ಗಮನ ಹರಿಸದೇ ನಿರ್ಲಕ್ಷ್ಯ ತೋರಿದ ಹಿನ್ನಲೆಯಲ್ಲಿ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ನಿನ್ನೆ ಪ್ರತಿಭಟನೆ ನಡೆಯಿತು

ಈ ಸಂದರ್ಭದಲ್ಲಿ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ ರಾಯಪ್ಪನ ಮಠ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಗಣೇಶ್ ಬೀಜಾಡಿ, ಕೋಶಾಧಿಕಾರಿ ಲೋಕೇಶ್ ಆಚಾರ್ ಮತ್ತು ಪದಾಧಿಕಾರಿಗಳು ಹಾಗೂ ಲೆಕ್ಕಪರಿಶೋಧಕ ಅರುಣ್ ಕೆ.ಪಿ ಉಪಸ್ಥಿತರಿದ್ದರು

ಪ್ರತಿಭಟನಾ ಸ್ಥಳಕ್ಕೆ ಪುರಸಭೆ ಮುಖ್ಯಾಧಿಕಾರಿ ಆನಂದ ಭೇಟಿ ನೀಡಿ ಮನವಿ ಸ್ವೀಕರಿಸಿದರು. ತಾನು ಹೊಸದಾಗಿ ಅಧಿಕಾರ ಸ್ವೀಕರಿಸಿದ್ದು ಮನವಿಯ ಅಂಶ ಪರಿಶೀಲಿಸಿ ವಾರದೊಳಗೆ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ.

Related posts

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

Worlds Fastest Bhagvad Gita Writer Completing 18 Chapters & 700 Verses in Just 5.30 Hours

ಮೀನುಗಾರರ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ-ಹಿಂದೂ ಯುವಸೇನೆ ಮುಖಂಡನ ವಿರುದ್ಧ ಸುಮೊಟೋ ಕೇಸ್