ಕಾರ್ಕಳ ತಾಲೂಕು ಕಛೇರಿ ಮುಂದೆ ಬೀಡಿ ಕಾರ್ಮಿಕರ ಪ್ರತಿಭಟನೆ..!!

ಕಾರ್ಕಳ : ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ 6 ಲಕ್ಷಕ್ಕೂ ಮಿಕ್ಕಿ ಬೀಡಿ ಕಾರ್ಮಿಕರು ಇವತ್ತು ಬೀಡಿ ಕಟ್ಟಿ ತಮ್ಮ ಜೀವನ ನಡೆಸುತ್ತಿದ್ದಾರೆ. ಇವತ್ತಿನ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಧಾರದಲ್ಲಿ ಸರಕಾರವು ಪ್ರತಿವರ್ಷ ಬೀಡಿ ಕಾರ್ಮಿಕರ ತುಟ್ಟಿಭತ್ಯೆ ಹೆಚ್ಚಳ ಮಾಡಿ ಕಾರ್ಮಿಕರು ಬದುಕಲು ಸಹಾಯವಾಗಲು ಏರಿಳಿತ ತುಟ್ಟಿಭತ್ಯೆ ಎಂಬುವುದು ಕಾನೂನು ಬದ್ಧ ಸವಲತ್ತು. ಆ ಪ್ರಕಾರ 2024 ಎಪ್ರಿಲ್ ತಿಂಗಳಿಂದ ಔದ್ಯಮಿಕ ಕಾರ್ಮಿಕರ ಗ್ರಾಹಕ ಬೆಲೆ ಸೂಚ್ಯಂಕ 568 ಪಾಯಿಂಟ್ ಆಗಿರುತ್ತದೆ ಅದರಂತೆ 1000 ಬೀಡಿಗೆ ರೂ 22.72ರಂತೆ ಬೀಡಿ ಕಾರ್ಮಿಕರಿಗೆ ನೀಡಬೇಕು. ಅದರೆ ಬೀಡಿ ಕಂಪನಿಯ ಮಾಲಕರು ನೀಡದೆ ಕಾರ್ಮಿಕರಿಗೆ ವಂಚನೆ ಮಾಡಿದ್ದಾರೆ. ಈ ಕುರಿತು ಮಾತುಕತೆಗೆ ಮಂಗಳೂರು ಸಹಾಯಕ ಕಾರ್ಮಿಕ ಅಧಿಕಾರಿಯವರು ಎರಡು ಬಾರಿ ಕಂಪನಿಯ ಮಾಲೀಕರನ್ನು ಕರೆದರೂ ಕೂಡ ತಪ್ಪಿಸಿಕೊಳ್ಳುತ್ತಿದ್ದಾರೆ.

ಸರಕಾರಿ ಅಧಿಕಾರಿಯವರ ಮಾತಿಗೂ ಕಿಂಚಿತ್ತೂ ಬೆಲೆ ಕೊಡದೆ ಸತಾಯಿಸುತ್ತಿದ್ದಾರೆ. ಭಾರತ್ ಬೀಡಿ, ಗಣೇಶ್ ಬೀಡಿ, ಟೆಲಿಫೋನ್ ಬೀಡಿ, ಇನ್ನೂ ಅನೇಕ ದೊಡ್ಡ ಕಂಪನಿಯ ಮಾಲಕರ ಪರವಾಗಿ ಇವತ್ತು ನಮ್ಮ ಶಾಸಕರು, ಸಂಸದರು ನಿಂತಿರುವ ಹಾಗೆ ಕಾಣುತ್ತದೆ. ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಯ 13 ಜನ ಶಾಸಕರು, 2ಜನ ಸಂಸದರು 6ಲಕ್ಷಕ್ಕೂ ಮಿಕ್ಕಿ ಇರುವ ಬಡ ಬೀಡಿ ಕಾರ್ಮಿಕರ ಬಗ್ಗೆ ವಿಧಾನಸಭೆಯಲ್ಲಿ ಅಥವಾ ಲೋಕಸಭೆಯಲ್ಲಿ ಕಾರ್ಮಿಕರ ನೈಜ ಸಮಸ್ಯೆಗಳ ಬಗ್ಗೆ ಮಾತಾನಾಡುವುದಿಲ್ಲ.

ಚುನಾವಣೆ ಬರುವಾಗ ಲಕ್ಷಾಂತರ ಬೀಡಿ ಕಾರ್ಮಿಕರ ಕುಟುಂಬದ ಮತಗಳು ಬೇಕು ಎಂದು ಕಾರ್ಕಳ ತಾಲೂಕು ಬೀಡಿ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಕವಿರಾಜ್ ಎಸ್. ಕಾಂಚನ್ ಅರೋಪಿಸಿದ್ದಾರೆ. ಮಾತ್ರವಲ್ಲದೆ ಚುನಾವಣಾ ಸಮಯದಲ್ಲಿ ಬೀಡಿ ಮಾಲಕರು ಬೇರೆ ಬೇರೆ ಪಕ್ಷಕ್ಕೆ ಹಣವನ್ನು ನೀಡುತ್ತಾರೆ ಆದರೆ ಕಾರ್ಮಿಕರು ಕಷ್ಟ ಪಟ್ಟು ದುಡಿದ ಹಣವನ್ನು ನೀಡಲು ಹಿಂದೇಟು ಹಾಕುವ ಮಾಲಕರ ವಿರುದ್ಧ ಸರಕಾರವು ಕೂಡಲೇ ಕ್ರಮ ತೆಗೆದು ಕೊಳ್ಳಬೇಕು ಎಂದು ಕಾರ್ಕಳ ತಾಲೂಕು ಕಛೇರಿ ಮುಂದೆ ನಡೆದ ಬೀಡಿ ಕಾರ್ಮಿಕರ ಪ್ರತಿಭಟನೆಯಲ್ಲಿ ಅಗ್ರಹಿಸಲಾಯಿತು.

ಇತ್ತೀಚೆಗೆ ಹಲವು ಬಾರಿ ಮಂಗಳೂರು ಕಂಪನಿಯ ಪ್ರಧಾನ ಕಛೇರಿ ಮುಂದೆ, ಹಾಗೂ ಮಂಗಳೂರು ಸಹಾಯಕ ಅಧಿಕಾರಿ ಕಛೇರಿ ಮಂದೆ ಪ್ರತಿಭಟನೆ ನಡೆಸಿದ ನಂತರ 11.40ಪೈಸೆಯಂತೆ ನೀಡಿರುತ್ತಾರೆ ಅದರೆ ಕಾರ್ಮಿಕರಿಗೆ ಕಾನೂನು ಬದ್ದವಾಗಿ ಸಿಗುವ 22.72ಪೈಸೆ ಕೊಡಬೇಕು. ಹಿಂದಿನ 3ವರ್ಷದ ಬಾಕಿ ಇರುವ ತುಟ್ಟಿಭತ್ಯೆ 12.75ಪೈಸೆ, ಕನಿಷ್ಟ ವೇತನ ಕೂಡಲೇ ಕಾರ್ಮಿಕರಿಗೆ ನೀಡಬೇಕು. ಎಂದು ಒತ್ತಾಯಿಸಿ ಇಂದು ಪ್ರತಿಭಟನೆ ನಡೆಸಿ ಕಾರ್ಕಳ ಕಾರ್ಮಿಕ ಅಧಿಕಾರಿ ಮುಖಾಂತರ ಮಂಗಳೂರು ಸಹಾಯಕ ಕಾರ್ಮಿಕ ಅಧಿಕಾರಿಯವರಿಗೆ ಮನವಿ ನೀಡಲಾಯಿತು. ಮುಂದಿನ ದಿನಗಳಲ್ಲಿ ಕಾರ್ಮಿಕ ಸಮಸ್ಯೆಗಳನ್ನು ಬಗೆಹರಿಸದೆ ಇದ್ದರೆ ಶಾಸಕರು ಕಛೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಚ್ಚರಿಕೆಯನ್ನು ನೀಡಲಾಯಿತು

ಪ್ರತಿಭಟನೆ ಸಭೆಯಲ್ಲಿ ಕಾರ್ಕಳ ತಾಲೂಕು ಬೀಡಿ ಕಾರ್ಮಿಕ ಸಂಘದ ಅಧ್ಯಕ್ಷರಾದ ಸುನೀತಾ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕವಿರಾಜ್. ಎಸ್.ಕಾಂಚನ್, ಕೋಶಾಧಿಕಾರಿ ಸುಮತಿ, ಕುಂದಾಪುರ ಬೀಡಿ ಕೆಲಸಗಾರರ ಸಂಘದ ಪ್ರಧಾನ ಕಾರ್ಯದರ್ಶಿ ಬಲ್ಕೀಸ್, ಉಡುಪಿ ಬೀಡಿ & ಟೋಬ್ಯಾಕೊ ಲೇಬರ್ ಯುನಿಯನ್ ನ ನಳಿನಿ.ಎಸ್ , ಸಿಐಟಿಯು ಕಾರ್ಕಳ ತಾಲೂಕು ಮುಖಂಡರಾದ ನಾಗೇಶ್, ಸಿಐಟಿಯು ಉಡುಪಿ ಮುಖಂಡರಾದ ಮೋಹನ್, ರೀತೇಶ್ , ಕಾರ್ಕಳ ಬೀಡಿ ಕಂಟ್ರಾಕ್ಟರ್ ಮುಸ್ತಾಫ ಹಾಗೂ ಬೀಡಿ ಮುಖಂಡರಾದ ವಿಲಾಸಿನಿ, ಶಕುಂತಲಾ, ಸುಮಿತ್ರಾ, ಜಯಂತಿ, ಲಕ್ಷೀ, ಜಾನವಿ, ವಸಂತಿ ಶೆಟ್ಟಿ, ಲತಾ, ಮಾಲತಿ, ಜಯಂತಿ, ವನಿತ, ಕವಿತ, ಪ್ರಮೀಳಾ, ಉಷಾ ಮೊದಲಾದವರು ಉಪಸ್ಥಿತರಿದ್ದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ