ರಂಗನಪಲ್ಕೆಯ ಡಾ. ಬಿ. ಆರ್. ಅಂಬೇಡ್ಕರ್ ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ

ಕಾರ್ಕಳ : ಕೌಡೂರು ಗ್ರಾಮದ ರಂಗನಪಲ್ಕೆಯ ಶೇಡಿಗುಡ್ಡೆ ಕರಿಕುಮೆರಿ ಪಾತಾವುಗೆ ಸಂಪರ್ಕಿಸುವ ಡಾ. ಬಿ.ಆರ್. ಅಂಬೇಡ್ಕರ್ ರಸ್ತೆ ದುರಸ್ತಿಗೆ ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಶುಭೊಧ್ ರಾವ್ ಮಾತನಾಡಿ, ಕಾರ್ಕಳ ತಾಲೂಕಿನಲ್ಲಿ ಈ ರೀತಿಯ ರಸ್ತೆ ಎಲ್ಲಿಯೂ ಇಲ್ಲ. ರಸ್ತೆ ತೀವ್ರವಾಗಿ ಹದೆಗೆಟ್ಟಿದೆ. ಸ್ಥಳೀಯ ಪಂಚಾಯತ್ ಆದ ಬೈಲೂರು ಗ್ರಾಮ ಪಂಚಾಯತ್ ಸದಸ್ಯರು ಈ ಬಗ್ಗೆ ಗಮನಹರಿಸದಿರುವುದು ಬೇಸರದ ಸಂಗತಿ ಎಂದರು. ಪ್ರತಿಭಟನಾ ಸ್ಥಳದಲ್ಲಿಯೇ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಕರೆ ಮಾಡಿ ಮಾತನಾಡಿ ರಸ್ತೆ ದುರಸ್ತಿಗೆ ಶಾಸಕರ ಅನುದಾನದಡಿ ಅನುದಾನಕ್ಕೆ ಮನವಿಪತ್ರ ತಯಾರಿಸುವಂತೆ ಸೂಚಿಸಿದರು.

ಪ್ರತಿಭಟನೆಯಲ್ಲಿ ಬೈಲೂರು ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಉದಯ ಶೆಟ್ಟಿ, ಬೈಲೂರು ಹಾಗೂ ಬೈಲೂರು, ಕಣಜಾರು, ಕೌಡೂರು ಬ್ಲಾಕ್ ಅಧ್ಯಕ್ಷರು, ಗ್ರಾಮಸ್ಥರು ಹಾಜರಾಗಿದ್ದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ