ರಘುಪತಿ ಭಟ್ ಅವರೇ ಕರಂಬಳ್ಳಿ ದೇವಸ್ಥಾನ ಶುದ್ಧಿಕರಣ ಮಾಡಿಸಿ ವೆಂಕಟರಮಣನ ಕ್ಷಮೆಗೆ ಪಾತ್ರರಾಗಿ – ಶ್ರೀರಾಮಸೇನೆ

ಉಡುಪಿ : ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಿದ ಹತಾಶೆಯಲ್ಲಿ ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ನಡೆದುಕೊಳ್ಳುತ್ತಿರುವ ಮಾಜಿ ಶಾಸಕರು ಕೆಲ ಹಿಂದೂ ವಿರೋಧಿ ಶಕ್ತಿಗಳ ಆಟಕ್ಕೆ ಗೊಂಬೆಯಂತೆ ಕುಣಿಯುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಅಖಂಡ ಹಿಂದೂರಾಷ್ಟ್ರದ ಕಲ್ಪನೆಗೆ ಮಗ್ಗಲ ಮುಳ್ಳಾಗಿರುವ ಗೋ ಭಕ್ಷಕರನ್ನು ದೇವಸ್ಥಾನದ ಪ್ರಾಂಗಣದೊಳಕ್ಕೆ ಕರೆಸಿ ದೇವಸ್ಥಾನದ ಪಾವಿತ್ರ್ಯ ತೆಯನ್ನು ಅಶುದ್ದಿ ಗೊಳಿಸಿರುವಿರಿ. ಹಿಂದೂ ಸಮಾಜದ ಬೆಂಬಲದಿಂದಲೇ ಮೂರು ಬಾರಿ ವಿಧಾನಸಭೆ ಪ್ರವೇಶಿಸಿದ ತಾವು ಅಧಿಕಾರದಲಿದ್ದಾಗ ಹಿಂದೂ ಫೈರ್ ಬ್ರಾಂಡ್ ತರ ನಡೆದುಕೊಳ್ಳುತ್ತಿದ್ದ ತಾವು ಇತ್ತೀಚಿನ ದಿನಗಳ ನಿಮ್ಮ ಕಾರ್ಯವೈಖರಿ ಅನುಮಾನ ಹುಟ್ಟಿಸುವಂತಿದೆ. ಇನ್ನಾದರೂ ಬುದ್ಧಿಕಲಿತು ವೆಂಕಟರಮಣನ ಶಾಪಕ್ಕೆ ತುತ್ತಾಗದೆ ದೇವಸ್ಥಾನ ಶುದ್ಧೀಕರಿಸಿ ಹಿಂದೂ ಸಮಾಜದ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳಿ ಎಂದು ಶ್ರೀರಾಮಸೇನೆ ಉಡುಪಿ ಜಿಲ್ಲಾಧ್ಯಕ್ಷರಾದ ಸುದರ್ಶನ್ ಪೂಜಾರಿ ಆಗ್ರಹಿಸಿದ್ದಾರೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ