ಉಡುಪಿ ಜಿಲ್ಲಾ ಪ್ರೌಢಶಾಲಾ ಕನ್ನಡ ಭಾಷಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಪಿ. ವಿ. ಆನಂದ ಸಾಲಿಗ್ರಾಮ ಆಯ್ಕೆ

ಉಡುಪಿ : ಉಡುಪಿ ಜಿಲ್ಲಾ ಪ್ರೌಢಶಾಲಾ ಕನ್ನಡ ಭಾಷಾ ಶಿಕ್ಷಕರ ಸಂಘದ ನೂತನ ಅಧ್ಯಕ್ಷರಾಗಿ ಹೆಬ್ರಿ ತಾಲೂಕಿನ ಮುದ್ರಾಡಿಯ ಎಂ ಎನ್ ಡಿ ಎಸ್ ಎಂ ಖಾಸಗಿ ಪ್ರೌಢಶಾಲೆ ಶಾಲೆಯ ಶಿಕ್ಷಕ, ಉಡುಪಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ, ಖ್ಯಾತ ಯಕ್ಷಗಾನ ಪ್ರಸಂಗಕರ್ತ ಪಿ. ವಿ. ಆನಂದ ಸಾಲಿಗ್ರಾಮ ಆಯ್ಕೆಯಾಗಿದ್ದಾರೆ.

ಗೌರವ ಅಧ್ಯಕ್ಷರಾಗಿ ಕೊಂಡಳ್ಳಿ ಪ್ರಭಾಕರ ಶೆಟ್ಟಿ ವಿದ್ಯಾವರ್ಧಕ ಪ್ರೌಢಶಾಲೆ ಮುಂಡ್ಕೂರು ಕಾರ್ಕಳ, ಕಾರ್ಯದರ್ಶಿಯಾಗಿ ರಾಜೀವ್ ಪೂಜಾರಿ, ಸರಕಾರಿ ಪದವಿಪೂರ್ವ ಕಾಲೇಜು ತೆಕ್ಕಟ್ಟೆ ಕುಂದಾಪುರ, ಕೋಶಾಧಿಕಾರಿಯಾಗಿ ಸುಭಿಕ್ಷಾ, ಸರಕಾರಿ ಪ್ರೌಢಶಾಲೆ ಕಾವಡಿ, ಬ್ರಹ್ಮಾವರ, ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಅಪರ್ಣ ಬಾಯಿ ಕೆ. ಸರಕಾರಿ ಪ್ರೌಢಶಾಲೆ ಬೀಜಾಡಿ ಕುಂದಾಪುರ, ಮಂಜುನಾಥ್ ಕುಲಾಲ, ಸರಕಾರಿ ಪದವಿ ಪೂರ್ವ ಕಾಲೇಜು ಹೆಬ್ರಿ, ಸವಿತಾ ಜಿ. ಸರಕಾರಿ ಪ್ರೌಢಶಾಲೆ ಉಪ್ಪಿನಕುದ್ರು, ಬೈಂದೂರು, ಕಾರ್ಕಳ ತಾಲೂಕು ಸಂಚಾಲಕರಾಗಿ ಜಾಲ್ಸೂರು ಗಣೇಶ್ ಶ್ರೀಮದ್ ಭುವನೇಂದ್ರ ಪ್ರೌಢ ಶಾಲೆ ಕಾರ್ಕಳ, ಉಡುಪಿ ತಾಲೂಕು ಸಂಚಾಲಕರಾಗಿ ಗಣಪತಿ ಭಟ್, ಸರಕಾರಿ ಸಂಯುಕ್ತ ಪ್ರೌಢಶಾಲೆ, ಒಳಕಾಡು, ಬ್ರಹ್ಮಾವರ ತಾಲೂಕು ಸಂಚಾಲಕರಾಗಿ ಜ್ಯೋತಿ ಕೃಷ್ಣ ಪೂಜಾರಿ, ಸರಕಾರಿ ಪ್ರೌಢಶಾಲೆ ಕೋಡಿಕನ್ಯಾನ, ಕುಂದಾಪುರ ತಾಲೂಕು ಸಂಚಾಲಕರಾಗಿ ರಮೇಶ್ ಕುಲಾಲ ಎನ್. ಸರಕಾರಿ ಪ್ರೌಢಶಾಲೆ ಕೆದೂರು, ಹೆಬ್ರಿ ತಾಲೂಕು ಸಂಚಾಲಕರಾಗಿ ಮಹೇಶ್ ಹೈಕಾಡಿ, ಅಮೃತಭಾರತಿ ವಿದ್ಯಾಲಯ ಹೆಬ್ರಿ, ಬೈಂದೂರು ತಾಲೂಕು ಸಂಚಾಲಕರಾಗಿ ಗಣೇಶ್ ದೇವಾಡಿಗ, ಸರಕಾರಿ ಪ್ರೌಢಶಾಲೆ ಆಲೂರು, ಕಾಪು ತಾಲೂಕು ಸಂಚಾಲಕರಾಗಿ ಶಕುಂತಲಾ, ಪೂರ್ಣಪ್ರಜ್ಞಾ ಪ್ರೌಢ ಶಾಲೆ, ಅದಮಾರು ಆಯ್ಕೆಯಾದರು.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ