ರಾಹುಲ್ ಗಾಂಧಿ ಹಿಂದೂಗಳ ತಾಳ್ಮೆ ಪರೀಕ್ಷೆಯ ದುಸ್ಸಾಹಸಕ್ಕೆ ಮುಂದಾಗಬೇಡಿ : ಯಶ್ ಪಾಲ್ ಸುವರ್ಣ ಆಕ್ರೋಶ

ಲೋಕಸಭೆಯಲ್ಲಿ ವಿಪಕ್ಷ ನಾಯಕನ ಜವಾಬ್ದಾರಿ ಹುದ್ದೆಯಲ್ಲಿರುವ ರಾಹುಲ್ ಗಾಂಧಿ ಮತೀಯ ಅಲ್ಪಸಂಖ್ಯಾತರ ಓಲೈಕೆಗಾಗಿ ಹಿಂದುತ್ವ, ರಾಷ್ಟೀಯ ಸ್ವಯಂ ಸೇವಕ ಸಂಘ, ಪ್ರಧಾನಿ ನರೇಂದ್ರ ಮೋದಿಯವರನ್ನು ಅವಹೇಳನ ಮಾಡುವ ಮೂಲಕ ತಮ್ಮ ನೈತಿಕ ಅಧಃಪತನವನ್ನು ಜಗಜ್ಜಾಹೀರು ಮಾಡಿದ್ದು, ಹಿಂದೂಗಳ ತಾಳ್ಮೆ ಪರೀಕ್ಷೆ ಮಾಡುವ ದುಸ್ಸಾಹಸಕ್ಕೆ ಮುಂದಾಗಬೇಡಿ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದೂ ಧರ್ಮಕ್ಕೆ ಪ್ರೀತಿ ಸಹೋದರತೆಯ ಪಾಠ ಮಾಡುವ ಮೊದಲು ಅಂದು 5 ಲಕ್ಷ ಕಾಶ್ಮೀರಿ ಹಿಂದೂಗಳನ್ನು ಓಡಿಸಿದವರು, ಅಮಾಯಕ ಕನಯ್ಯಲಾಲ್‌ನನ್ನು ಹತ್ಯೆ ಮಾಡಿದವರು, ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರು, ಡಿಜೆ‌ಹ‌ಳ್ಳಿ, ಕೆಜೆ‌ಹಳ್ಳಿಯಲ್ಲಿ ದಲಿತನ ಮನೆ ಪೊಲೀಸ್ ಠಾಣೆಗೆ ಬೆಂಕಿ ಇಟ್ಟವರು, ಪಿಎಫ್ಐ ಜೊತೆ ಸೇರಿ ಭಯೋತ್ಪಾದನೆ ಮಾಡಿ ದೇಶದ್ರೋಹ ಮಾಡಿದವರು, ಉಡುಪಿ ಶಾಲೆಯಲ್ಲಿ ಹಿಜಾಬ್ ವಿವಾದ ಸೃಷ್ಟಿಸಿ ಶಿಕ್ಷಣ ವ್ಯವಸ್ಥೆಗೆ ಧಕ್ಕೆ ತಂದವರು ಯಾರು ಎಂಬುದನ್ನು ಕೂಡಾ ಲೋಕಸಭೆಯಲ್ಲಿ ಹೇಳುವ ಧೈರ್ಯ ರಾಹುಲ್ ಗಾಂಧಿಗೆ ಇದೆಯೇ ಎಂದು ಹೇಳಿದ್ದಾರೆ.

ಹಿಂದೂ ಧರ್ಮಕ್ಕೆ ಹಿಂಸೆಯ ಬಣ್ಣ ಬಳಿಯುವ ಮೂಲಕ ಸನಾತನ ಹಿಂದೂ ಧರ್ಮಕ್ಕೆ ರಾಹುಲ್ ಗಾಂಧಿ ಅಪಮಾನ ಮಾಡಿದ್ದಾರೆ. 49 ಸೀಟುಗಳು ಕೊಟ್ಟಾಗ ಹಿಂದುತ್ವ ಕೆಟ್ಟದು ಹಿಂದುಗಳು ಒಳ್ಳೆಯವರು ಎಂದಿದ್ದ ಯಾವಾಗ 99 ಸೀಟುಗಳು ಸಿಕ್ಕಿದ ಕೂಡಲೇ ಈಗ ಹಿಂದೂಗಳೇ ಹಿಂಸೆ ಮಾಡುವವರು ಎನ್ನುವ ಮೂಲಕ ತಮ್ಮ ಹಿಂದೂ ವಿರೋಧಿ ನಿಲುವನ್ನು ಪ್ರದರ್ಶಿಸಿದ್ದಾರೆ. ಜಾಗೃತ ಹಿಂದೂ ಸಮಾಜ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಉತ್ತರವನ್ನು ನೀಡುವ ಅನಿವಾರ್ಯತೆ ಇದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ