ಶ್ರೀಕೃಷ್ಣನಿಗೆ ಪರ್ಯಾಯ ಶ್ರೀಗಳಿಂದ ರಾಮನ ಅಲಂಕಾರ

ಉಡುಪಿ : ಶ್ರೀಕೃಷ್ಣಮಠದಲ್ಲಿ ರಾಮನವಮಿ ಪ್ರಯುಕ್ತ ರಾಮಾಯಣ ಪಾರಾಯಣ, ದೇವರಿಗೆ ವಿಶೇಷ ಪೂಜೆಗಳನ್ನು ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು, ಶ್ರೀಸುಶ್ರೀಂದ್ರತೀರ್ಥ ಶ್ರೀಪಾದರು ನಡೆಸಿದರು.

ಇದೇ ವೇಳೆ ಪರ್ಯಾಯ ಶ್ರೀಗಳು ಶ್ರೀಕೃಷ್ಣನಿಗೆ ರಾಮನ ಅಲಂಕಾರ ಮಾಡಿದ್ದು ಗಮನ ಸೆಳೆಯಿತು. ಜಿಲ್ಲೆಯ ವಿವಿಧ ದೇವಸ್ಥಾನ ಮತ್ತು ಭಜನಾಮಂದಿರದಲ್ಲಿ ರಾಮನವಮಿ ಉತ್ಸವವನ್ನು ಆಚರಿಸಲಾಯಿತು.

ವಿವಿಧ ದೇವಸ್ಥಾನಗಳಲ್ಲಿ ಅಭಿಷೇಕ, ಅಲಂಕಾರ, ತೊಟ್ಟಿಲು ಪೂಜೆ, ಮಹಾಪೂಜೆಗಳನ್ನು ನಡೆಸಲಾಯಿತು. ಭಜನಮಂದಿರಗಳಲ್ಲಿ ವಿಶೇಷ ಭಜನೆಗಳು ಸಂಪನ್ನಗೊಂಡವು.

Related posts

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ವರ್ಗಾವಣೆಗೊಳ್ಳುತ್ತಿರುವ ನ್ಯಾಯಾಧೀಶರುಗಳಿಗೆ ವಕೀಲರ ಸಂಘದಿಂದ ಬೀಳ್ಕೊಡುಗೆ

ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿ, ಸಿಬಂದಿ ಕನ್ನಡದಲ್ಲೇ ವ್ಯವಹರಿಸುವ ಕಾನೂನು ಅಗತ್ಯ – ಸಚಿವರಿಗೆ ಸಂಸದ ಕೋಟ ಪತ್ರ