ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿ ಖುಲಾಸೆ

ಮಂಗಳೂರು : ಅಪ್ರಾಪ್ತ ವಯಸ್ಕ ಬಾಲಕಿಯ ಅತ್ಯಾಚಾರ ಮಾಡಿದ್ದ ಆರೋಪಿಯನ್ನು ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಎರಡನೇ ವಿಶೇಷ ಪೋಕ್ಸೋ ಹೆಚ್ಚುವರಿ ನ್ಯಾಯಾಲಯ ದೋಷಮುಕ್ತಗೊಳಿಸಿ ತೀರ್ಪಿತ್ತಿದೆ.

ಬೆಳ್ತಂಗಡಿಯ ಮಡಂತ್ಯಾರಿನಲ್ಲಿ 23-06-2023‌ರಂದು ಆರೋಪಿ ಶಾಶ್ವತ್‌ ಬಾಲಕಿಯನ್ನು ಹುಟ್ಟುಹಬ್ಬದ ನೆಪದಲ್ಲಿ ತನ್ನ ಸಹೋದರನ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬೆಳ್ತಂಗಡಿ ಪೊಲೀಸ್‌ ಠಾಣೆಯ ವೃತ್ತ ನಿರೀಕ್ಷಕ ನಾಗೇಶ್‌ ಪ್ರಕರಣದ ತನಿಖೆ ನಡೆಸಿ ಆರೋಪಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಲಯ ಒಟ್ಟು 12 ಸಾಕ್ಷಿಗಳನ್ನು ವಿಚಾರಣೆ ಮಾಡಿತ್ತು. ಈ ಪ್ರಕರಣದಲ್ಲಿ 24 ದಾಖಲೆಗಳನ್ನು ಹಾಜರುಪಡಿಸಲಾಗಿತ್ತು.

ನ್ಯಾಯಾಧೀಶ ಮನು ಕೆ.ಎಸ್‌. ಅವರು ವಿಚಾರಣೆ ನಡೆಸಿ ಈ ತೀರ್ಪು ನೀಡಿದ್ದಾರೆ. ಆರೋಪಿ ಪರ ಆದಾಯ ತೆರಿಗೆಯ ವಿಶೇಷ ಅಭಿಯೋಜಕರೂ ಆಗಿರುವ ಹಿರಿಯ ನ್ಯಾಯವಾದಿ ಹರ್ಷಕುಮಾರ್‌ ಅವರು ವಾದ ಮಂಡಿಸಿದ್ದರು.

Related posts

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ