ಕುಂದಾಪುರ ಉಪವಿಭಾಗಾಧಿಕಾರಿಯಾಗಿ ರಶ್ಮಿ ಎಸ್.ಆ‌ರ್

ಉಡುಪಿ : ಕುಂದಾಪುರ ಉಪವಿಭಾಗಾಧಿಕಾರಿಯಾಗಿ ರಶ್ಮಿ ಎಸ್. ಆ‌ರ್. ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶಿಸಿದೆ. ರಶ್ಮಿ ಅವರು 2014ನೇ ಬ್ಯಾಚ್ ಕೆ.ಎ.ಎಸ್ ಅಧಿಕಾರಿ.

2017ರಲ್ಲಿ ದ.ಕ ಜಿಲ್ಲೆಯಲ್ಲಿ ಪ್ರೊಬೇಷನರಿ ಮುಗಿಸಿ, 2019ರಲ್ಲಿ ಬಂಟ್ವಾಳ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸಿದ್ದರು. 2022ರಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ಪದೋನ್ನತಿ ಹೊಂದಿದ್ದರು.

2023ರಲ್ಲಿ ಕುಂದಾಪುರ ಉಪವಿಭಾಗಾಧಿಕಾರಿಯಾಗಿ ನೇಮಕಗೊಂಡಿದ್ದ ಅವರು, ಜುಲೈ 2024ರಲ್ಲಿ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸರ್ಕಾರದ ಅಧೀನ ಕಾರ್ಯದರ್ಶಿಯಾಗಿ ವರ್ಗಾವಣೆಗೊಂಡಿದ್ದರು. ಬಳಿಕ ಚಿಕ್ಕಮಗಳೂರು ಉಪವಿಭಾಗದ ಉಪವಿಭಾಗಾಧಿಕಾರಿಯಾಗಿದ್ದರು. ಇದೀಗ ಮತ್ತೆ ಕುಂದಾಪುರಕ್ಕೆ ವರ್ಗಾವಣೆಗೊಂಡಿದ್ದಾರೆ.

Related posts

ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ ನಿಂಬಾಳ್ಕರ್‌ಗೆ ಮುಖ್ಯಮಂತ್ರಿಗಳ ಸ್ವರ್ಣಪದಕ ಪ್ರದಾನ

ಕೋಳಿ ಅಂಕದ ವಿಚಾರ ಮತ್ತೆ ಮುನ್ನೆಲೆಗೆ; ಉಡುಪಿ ಶಾಸಕರಿಗೆ ಕಾಂಗ್ರೆಸ್ ಟಾಂಗ್!

ಸಾವಿರಾರು ರೂ. ಚಾಕಲೇಟ್ ಕದ್ದೊಯ್ದ ಚಾಕಲೇಟ್ ಕಳ್ಳರ ಕೈಚಳಕ ಸಿಸಿ ಕ್ಯಾಮೆರಾದಲ್ಲಿ ದಾಖಲು!