ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ರತ್ನಾಕರ ಶೆಣೈ ಶಿವಪುರ ಆಯ್ಕೆ

ಹೆಬ್ರಿ : ತಾಲ್ಲೂಕಿನ ಯಕ್ಷಗಾನ ಕಲಾವಿದ, ಸಮಾಜ ಸೇವಕ ಶಿವಪುರ ರತ್ನಾಕರ ಶೆಣೈ ಅಂತರರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ರವೀಂದ್ರ ಕಲಾ ಕ್ಷೇತ್ರ ಬೆಂಗಳೂರಿನಲ್ಲಿ ಇದೇ ಬರುವ 23-06-2024 ರ ಭಾನುವಾರ ಸಂಜೆ ಪ್ರಶಸ್ತಿ ಪಡೆಯಲಿದ್ದಾರೆ.

ಶಿವಪುರ ರತ್ನಾಕರ ಶೆಣೈ ಅವರು ಹವ್ಯಾಸಿ ಕಲಾವಿದರಾಗಿದ್ದು, ಯಕ್ಷ ಗುರುಗಳಾಗಿ ಉಚಿತವಾಗಿ ಯಕ್ಷಗಾನ ತರಬೇತಿ ನೀಡುವುದರ ಜೊತೆಗೆ 100ಕ್ಕೂ ಹೆಚ್ಚು ಯಕ್ಷಗಾನ ಪ್ರದರ್ಶನ ನೀಡಿದ್ದಾರೆ. ಹಲವಾರು ಸಂಘ ಸಂಸ್ಥೆಗಳಿಂದ ಗೌರವಕ್ಕೆ ಪಾತ್ರರಾಗಿದ್ದಾರೆ. ಅನಾಥಾಶ್ರಮ ವಾಸಿಗಳಿಗೆ ಯಕ್ಷಗಾನ, ಭಜನಾ ತರಬೇತಿ ನೀಡಿದ್ದಾರೆ.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ