ಕರಾವಳಿಯಲ್ಲಿ ಜೂ.24ರವರೆಗೆ ರೆಡ್ ಅಲರ್ಟ್, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ

ಉಡುಪಿ : ಮುಂದಿನ ಐದು ದಿನಗಳ ಕಾಲ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35ರಿಂದ 45ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಈ ಅವಧಿಯಲ್ಲಿ ಸಮುದ್ರ ಪ್ರಕ್ಷುಬ್ಧವಾಗಿರಲಿದೆ. ಆದುದರಿಂದ ರಾಜ್ಯದ ಮೂರು ಕರಾವಳಿ ಜಿಲ್ಲೆಗಳ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇದರೊಂದಿಗೆ ಜೂ.22ರಿಂದ 24ರ ನಡುವಿನ ಅವಧಿಯಲ್ಲಿ ಸಾಧಾರಣ ದಿಂದ (64.5ಮಿ.ಮೀ-115.5ಮಿ.ಮೀ.)ದಿಂದ ಭಾರೀ ಮಳೆ (115.5 ರಿಂದ 204.4ಮಿ.ಮೀ) ಮಳೆಯಾಗಲಿದ್ದು, ಕೆಲವು ಪ್ರದೇಶಗಳಲ್ಲಿ 204.4ಮಿ.ಮೀ.ಗಿಂತಲೂ ಅಧಿಕ ಮಳೆ ಬೀಳುವ ಸಾಧ್ಯತೆ ಇದ್ದು ರಾಜ್ಯ ಕರಾವಳಿಯಲ್ಲಿ ರೆಡ್ ಅಲರ್ಟ್‌ನ್ನು ಘೋಷಿಸಲಾಗಿದೆ ಎಂದು ಹಮಾಮಾನ ಮುನ್ಸೂಚನೆಯಲ್ಲಿ ತಿಳಿಸಲಾಗಿದೆ.

ಅಲ್ಲದೇ ಇಂದು ಸಂಜೆಯಿಂದ ಜೂ.21ರ ಮಧ್ಯರಾತ್ರಿ 11:30ರವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯಿಂದ ಮಂಗಳೂರಿನವರೆಗೆ, ಉಡುಪಿ ಜಿಲ್ಲೆಯ ಬೈಂದೂರಿನಿಂದ ಕಾಪುವಿನವರೆಗೆ ಹಾಗೂ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಿಂದ ಮಜಲಿವರೆಗಿನ ಕಡಲಿನಲ್ಲಿ 2.0ಮೀ.ನಿಂದ 2.7ಮೀ.ವರೆಗಿನ ಎತ್ತರದ ಸಮುದ್ರದಲೆಗಳು ದಡವನ್ನು ಅಪ್ಪಳಿಸುವ ಸಾಧ್ಯತೆ ಇದೆ ಎಂದೂ ಹವಾಮಾನ ಇಲಾಖೆ ತಿಳಿಸಿದೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ