ಕೊಳಚೆ ನೀರಿಗೆ ಪರಿಹಾರ; ಜಿಲ್ಲಾಧಿಕಾರಿಗೆ ಮನವಿ

ಮಂಗಳೂರು : ಕೊಣಾಜೆ ಗ್ರಾಮದ ಅಸೈಗೋಳಿಯಲ್ಲಿರುವ 7ನೇ ಪಡೆ ಕೆಎಸ್‌ಆರ್‌ಪಿಯ ವಸತಿಗೃಹದ ಕೊಳಚೆ ನೀರು ಸ್ಥಳೀಯ ಹಲವು ಮನೆಗಳ ಮುಂದೆ ಹರಿಯುತ್ತಿರುವುದಾಗಿ ಆರೋಪಿಸಿ ಅಸೈಗೋಳಿಯ ಕಾರುಣ್ಯಾ ಫೌಂಡೇಶನ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ಗೆ ಮನವಿ ಸಲ್ಲಿಸಲಾಯಿತು. ಮನವಿಗೆ ತಕ್ಷಣ ಸ್ಪಂದಿಸಿದ ಜಿಲ್ಲಾಧಿಕಾರಿ ಸಂಬಂಧಪಟ್ಟ ಅಧಿಕಾರಿಗೆ ಕರೆ ಮಾಡಿ ಸಮಸ್ಯೆ ಬಗ್ಗೆ ತಿಳಿಸಿದರು.

ಈ ಸಂದರ್ಭದಲ್ಲಿ ಕಾರುಣ್ಯಾ ಫೌಂಡೇಶನ್‌ನ ಅಧ್ಯಕ್ಷ ಅರುಣ್ ಡಿಸೋಜಾ, ಸ್ಥಳೀಯರಾದ ಸುಧಾಕರ್ ನಾಯಕ್, ವಿಶ್ವನಾಥ್ ಶೆಟ್ಟಿ, ಪುರಂದರ ಶೆಟ್ಟಿ ಅಸೈ, ವಿನ್ಸಿ‌ ರೇಗೋ, ಕವಿತಾ ಪಿ.ಆರ್, ಶರ್ಮಿಳಾ ಪಿ. ರೈ ಉಪಸ್ಥಿತರಿದ್ದರು.

Related posts

ಮಾ.31ರಂದು ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

Worlds Fastest Bhagvad Gita Writer Completing 18 Chapters & 700 Verses in Just 5.30 Hours