ಕೊಳಚೆ ನೀರಿಗೆ ಪರಿಹಾರ; ಜಿಲ್ಲಾಧಿಕಾರಿಗೆ ಮನವಿ

ಮಂಗಳೂರು : ಕೊಣಾಜೆ ಗ್ರಾಮದ ಅಸೈಗೋಳಿಯಲ್ಲಿರುವ 7ನೇ ಪಡೆ ಕೆಎಸ್‌ಆರ್‌ಪಿಯ ವಸತಿಗೃಹದ ಕೊಳಚೆ ನೀರು ಸ್ಥಳೀಯ ಹಲವು ಮನೆಗಳ ಮುಂದೆ ಹರಿಯುತ್ತಿರುವುದಾಗಿ ಆರೋಪಿಸಿ ಅಸೈಗೋಳಿಯ ಕಾರುಣ್ಯಾ ಫೌಂಡೇಶನ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ಗೆ ಮನವಿ ಸಲ್ಲಿಸಲಾಯಿತು. ಮನವಿಗೆ ತಕ್ಷಣ ಸ್ಪಂದಿಸಿದ ಜಿಲ್ಲಾಧಿಕಾರಿ ಸಂಬಂಧಪಟ್ಟ ಅಧಿಕಾರಿಗೆ ಕರೆ ಮಾಡಿ ಸಮಸ್ಯೆ ಬಗ್ಗೆ ತಿಳಿಸಿದರು.

ಈ ಸಂದರ್ಭದಲ್ಲಿ ಕಾರುಣ್ಯಾ ಫೌಂಡೇಶನ್‌ನ ಅಧ್ಯಕ್ಷ ಅರುಣ್ ಡಿಸೋಜಾ, ಸ್ಥಳೀಯರಾದ ಸುಧಾಕರ್ ನಾಯಕ್, ವಿಶ್ವನಾಥ್ ಶೆಟ್ಟಿ, ಪುರಂದರ ಶೆಟ್ಟಿ ಅಸೈ, ವಿನ್ಸಿ‌ ರೇಗೋ, ಕವಿತಾ ಪಿ.ಆರ್, ಶರ್ಮಿಳಾ ಪಿ. ರೈ ಉಪಸ್ಥಿತರಿದ್ದರು.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ

ಬಿಎಸ್‌ಎನ್‌ಎಲ್ ಸಂಪರ್ಕದ ಕುಂದು ಕೊರತೆ, ಗುಣಮಟ್ಟ ಉತ್ತಮಗೊಳಿಸುವಿಕೆ ಸಭೆಯಲ್ಲಿ ಸಂಸದ ಕೋಟ ಭಾಗಿ