ಬಾವಿಗೆ ಬಿದ್ದ ಜಿಂಕೆಯ ರಕ್ಷಣೆ

ಉಡುಪಿ : ಜಿಲ್ಲೆಯ ಕೆದೂರಿನ ಆವರಣವಿಲ್ಲದ ಬಾವಿಗೆ ಬಿದ್ದ ಜಿಂಕೆಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳೀಯರ ಸಹಕಾರದಿಂದ ರಕ್ಷಿಸಿದ್ದಾರೆ.

ಅರಣ್ಯ ಪ್ರದೇಶದಿಂದ ಬಂದ ಜಿಂಕೆ, ರಾತ್ರಿ ವೇಳೆ 25 ಅಡಿ ಆಳದ ಬಾವಿಗೆ ಬಿದ್ದಿತ್ತು. ಬೆಳಗಿನ ಜಾವ ಜಿಂಕೆಯ ಬಾವಿಗೆ ಬಿದ್ದ ವಿಷಯವನ್ನು ಸ್ಥಳೀಯರು ಗಮನಿಸಿದ ಬಳಿಕ ತಕ್ಷಣವೇ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳೀಯರ ಸಹಕಾರದಿಂದ ಬಾವಿಯಲ್ಲಿದ್ದ ಜಿಂಕೆಯನ್ನು ಸುರಕ್ಷಿತವಾಗಿ ರಕ್ಷಿಸಿ ಅದನ್ನು ಅರಣ್ಯಕ್ಕೆ ಬಿಡುಗಡೆ ಮಾಡಿದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ