ತಡರಾತ್ರಿ ಹೊತ್ತಿ ಉರಿದ ರಿಟ್ಜ್ ಕಾರು; ಕ್ಷಣಾರ್ಧದಲ್ಲಿ ಭಸ್ಮ‌, ಚಾಲಕ ಬಚಾವ್

ಮಣಿಪಾಲ : ರಿಟ್ಜ್ ಕಾರೊಂದು ಹೊತ್ತಿ ಉರಿದ ಘಟನೆ ಮಣಿಪಾಲದಲ್ಲಿ ತಡರಾತ್ರಿ 1.35 ರ ಸುಮಾರಿಗೆ ಸಂಭವಿಸಿದೆ.

ಕೆಎಂಸಿ ಆಸ್ಪತ್ರೆಗೆ ಬಂದ ರೋಗಿಗಳ ಪೈಕಿಯವರ ಕಾರು ಇದಾಗಿದೆ ಎಂದು ತಿಳಿದು ಬಂದಿದೆ.

ಇಬ್ಬರು ವ್ಯಕ್ತಿಗಳು ಮಣಿಪಾಲದ ಬಬ್ಬುಸ್ವಾಮಿ ದೇವಸ್ಥಾನದ ಮುಂಭಾಗ ರಸ್ತೆ ಬದಿ ಕಾರನ್ನು ನಿಲ್ಲಿಸಿ ಒಳಗಡೆ ಮಲಗಿದ್ದರು. ಯಾವುದೋ ಕಾರಣಕ್ಕೆ ಕಾರಿನಲ್ಲಿ ಬೆಂಕಿ ಹತ್ತಿಕೊಂಡದ್ದು ಗೊತ್ತಾದ ತಕ್ಷಣ ಇಬ್ಬರೂ ಹೊರಗೆ ಬಂದು ಪಾರಾಗಿದ್ದಾರೆ. ಧಗಧಗಿಸಿ ಉರಿಯುತ್ತಿದ್ದಂತೆ ಕಾರು ಹಿಮ್ಮುಖವಾಗಿ ಚಲಿಸಿದೆ ಎನ್ನಲಾಗಿದೆ. ತಕ್ಷಣ ಅಗ್ನಿಶಾಮಕ ಸಿಬ್ಬಂದಿಗೆ ವಿಷಯ ಮುಟ್ಟಿಸಲಾಯಿತು. ಅವರು ಬರುವಷ್ಟರಲ್ಲಿ ಕಾರು ಸಂಪೂರ್ಣ ಉರಿದು ಹೋಗಿತ್ತು ಎಂದು ತಿಳಿದುಬಂದಿದೆ.

Related posts

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ವರ್ಗಾವಣೆಗೊಳ್ಳುತ್ತಿರುವ ನ್ಯಾಯಾಧೀಶರುಗಳಿಗೆ ವಕೀಲರ ಸಂಘದಿಂದ ಬೀಳ್ಕೊಡುಗೆ

ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿ, ಸಿಬಂದಿ ಕನ್ನಡದಲ್ಲೇ ವ್ಯವಹರಿಸುವ ಕಾನೂನು ಅಗತ್ಯ – ಸಚಿವರಿಗೆ ಸಂಸದ ಕೋಟ ಪತ್ರ