ರಸ್ತೆ ಅಪಘಾತ – ಮಂಗಳಾದೇವಿ ಯಕ್ಷಗಾನ ಮೇಳದ ಭಾಗವತ ಸತೀಶ್ ಆಚಾರ್ಯ ಸ್ಥಳದಲ್ಲೇ ಮೃತ್ಯು

ಬೆಳ್ತಂಗಡಿ : ಎರಡು ಬೈಕ್‌ಗಳ ನಡುವೆ ಸಂಭಾವಿಸಿದ ಅಪಘಾತದಲ್ಲಿ ಮಂಗಳಾದೇವಿ ಯಕ್ಷಗಾನ ಮೇಳದ ಭಾಗವತ ಸಾವನ್ನಪ್ಪಿದ ಘಟನೆ ಮಾ. 31‌ರಂದು ಸೋಮವಾರ ಬೆಳಗಿನ ಜಾವ ಅಂಡಿಂಜೆ ಕಿಲಾರ ಮಾರಿಕಾಂಬಾ ದೇವಸ್ಥಾನದ ಸಮೀಪದ ತಿರುವು ರಸ್ತೆಯಲ್ಲಿ ಸಂಭವಿಸಿದೆ.

ಮೃತರನ್ನು ಅಂಡಿಂಜೆ ಗ್ರಾಮದ ಪಿಲಿಯೂರು ಮನೆ ನಿವಾಸಿ ಸತೀಶ್ ಆಚಾರ್ಯ (40) ಎಂದು ಗುರುತಿಸಲಾಗಿದೆ.

ಮಂಗಳಾದೇವಿ ಯಕ್ಷಗಾನ ಮೇಳದ ಭಾಗವತರಾಗಿದ್ದ ಸತೀಶ್ ಆಚಾರ್ಯ ಇವರು ಸುಳ್ಯದಲ್ಲಿ ಭಾನುವಾರ ನಡೆದ ಯಕ್ಷಗಾನ ಮುಗಿಸಿ ತಮ್ಮ ಬೈಕ್‌ನಲ್ಲಿ ಅಂಡಿಂಜೆಗೆ ಬರುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ನಡೆದಿದ್ದು, ಗಂಭೀರ ಗಾಯಗೊಂಡ ಇವರು ಸ್ಥಳದಲ್ಲೇ ಮೃತರಾಗಿದ್ದಾರೆ.

ಅಪಘಾತದಲ್ಲಿ ಎದುರಿನಿಂದ ಬರುತ್ತಿದ್ದ ಬೈಕ್‌ ಸವಾರ ಕೂಡ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತ ಸತೀಶ್‌ ಆಚಾರ್ಯರಿಗೆ ತಾಯಿ, ಸಹೋದರಿ, ಸಹೋದರ ಇದ್ದಾರೆ. ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ ನಿಂಬಾಳ್ಕರ್‌ಗೆ ಮುಖ್ಯಮಂತ್ರಿಗಳ ಸ್ವರ್ಣಪದಕ ಪ್ರದಾನ

ಕೋಳಿ ಅಂಕದ ವಿಚಾರ ಮತ್ತೆ ಮುನ್ನೆಲೆಗೆ; ಉಡುಪಿ ಶಾಸಕರಿಗೆ ಕಾಂಗ್ರೆಸ್ ಟಾಂಗ್!

ಸಾವಿರಾರು ರೂ. ಚಾಕಲೇಟ್ ಕದ್ದೊಯ್ದ ಚಾಕಲೇಟ್ ಕಳ್ಳರ ಕೈಚಳಕ ಸಿಸಿ ಕ್ಯಾಮೆರಾದಲ್ಲಿ ದಾಖಲು!