ಕಾಟಿಪಳ್ಳದ ಶ್ರೀ ನಾರಾಯಣ ಗುರು ಶಿಕ್ಷಣ ಸಂಸ್ಥೆಯಲ್ಲಿ ‘ಸಾಹಿತ್ಯ ಸಿರಿ’ ಕಾರ್ಯಕ್ರಮ

ಸುರತ್ಕಲ್ : ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕ, ಸುರತ್ಕಲ್ ಹೋಬಳಿ ಘಟಕದ ಆಶ್ರಯದಲ್ಲಿ ‘ಸಾಹಿತ್ಯ ಸಿರಿ’ ಕಾರ್ಯಕ್ರಮವು ದಿನಾಂಕ 22-06-2024 ರಂದು ಕಾಟಿಪಳ್ಳದ ಶ್ರೀ ನಾರಾಯಣ ಗುರು ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ‘ಅಮೃತ ಪ್ರಕಾಶ’ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ಅಧ್ಯಕ್ಷರಾದ ಪಿ. ದಯಾಕರ್ ಮಾತನಾಡಿ “ಇಂತಹ ಸಾಹಿತ್ಯದ ಸಂಪತ್ತನ್ನು ಹೆಚ್ಚಿಸುವ ಕಾರ್ಯಕ್ರಮ ನಿರಂತರವಾಗಿ ನಡೆಯುತ್ತಾ ಇರಲಿ” ಎಂದು ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಸಾಹಿತಿ ಹಾಗೂ ವಾಗ್ಮಿಯಾದ ರೇಮಂಡ್ ಡಿ. ಕುನ್ಹಾ ಭಾಗವಹಿಸಿ ಮಕ್ಕಳಿಗೆ ಕಥೆ ಕಟ್ಟುವ ವಿಧಾನ ಹಾಗೂ ಅವುಗಳು ತೆರೆದುಕೊಳ್ಳುವಂತಹ ಕುತೂಹಲದ ಬಾಗಿಲು ಹೇಗಿರಬೇಕು ಎಂದು ತಿಳಿಸಿಕೊಟ್ಟರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸಾಹಿತಿ, ಚಿಂತಕ, ವಾಗ್ಮಿ ಹಾಗೂ ಸಂಸ್ಥೆಯ ಆಡಳಿತ ಅಧಿಕಾರಿ ಡಾ. ಗಣೇಶ್ ಅಮೀನ್ ಸಂಕಮಾರ್, ಎಂ.ಆರ್.ಪಿ.ಎಲ್. ವಿಶ್ರಾಂತ ಪ್ರಬಂಧಕರಾದ ವೀಣಾ ಶೆಟ್ಟಿ, ತಾಲೂಕು ಕ.ಸಾ.ಪ. ಅಧ್ಯಕ್ಷರಾದ ಮಂಜುನಾಥ ಎಸ್. ರೇವಣ್ಕರ್ ಕಾರ್ಯಕ್ರಮಕ್ಕೆ ಶುಭ ಹಾರೈಸುತ್ತಾ, ಸಾಹಿತ್ಯ ಸತ್ವವನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕೆಂದು ತಿಳಿಸಿದರು.

ಕ.ಸಾ.ಪ. ಸುರತ್ಕಲ್ ಹೋಬಳಿ ಘಟಕದ ಅಧ್ಯಕ್ಷೆ ಹಾಗೂ ಸಂಸ್ಥೆಯ ಮುಖ್ಯಸ್ಥೆಯಾದ ಶ್ರೀಮತಿ ಗುಣವತಿ ರಮೇಶ್ ಇವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಕವಯತ್ರಿ ಅನುರಾಧ ರಾಜೀವ್ ಹಾಗೂ ಲಲಿತ ಪದ್ಮಿನಿಯವರಿಂದ ಸ್ವರಚಿತ ಕವನ ವಾಚನ ಈ ಸಂದರ್ಭದಲ್ಲಿ ನಡೆಯಿತು. ಶ್ರೀ ನಾರಾಯಣ ಗುರು ಸಮೂಹ ಸಂಸ್ಥೆಗಳ ಮುಖ್ಯಸ್ಥರುಗಳು, ಶಿಕ್ಷಕರು ಹಾಗೂ ಸುಮಾರು 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಕ.ಸಾ.ಪ. ಸುರತ್ಕಲ್ ಹೋಬಳಿ ಘಟಕದ ಗೌರವ ಕಾರ್ಯದರ್ಶಿ ಹಾಗೂ ಶಿಕ್ಷಕಿ ಅಕ್ಷತಾ ಕೇಶವ್ ನಿರೂಪಿಸಿ, ಶಿಕ್ಷಕಿ ಶ್ರೀಮತಿ ರೇಣುಕಾ ವಂದಿಸಿದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ