ಬಿಜೆಪಿ ಉಡುಪಿ ನಗರ ಮಂಡಲದ ವಿಶೇಷ ಕಾರ್ಯಕಾರಿಣಿ

ಉಡುಪಿ : ಬಿಜೆಪಿ ಉಡುಪಿ ನಗರ ಮಂಡಲದ ವಿಶೇಷ ಕಾರ್ಯಕಾರಿಣಿಯು ಜು.31ರಂದು ಬಿಜೆಪಿ ಉಡುಪಿ ನಗರ ಮಂಡಲಾಧ್ಯಕ್ಷ ದಿನೇಶ್ ಅಮೀನ್ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯ ಸಭಾಂಗಣದಲ್ಲಿ ನಡೆಯಿತು.

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು ವಿಶೇಷ ಕಾರ್ಯಕಾರಿಣಿ ಸಭೆಯನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.

ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಶಾಸಕ ಯಶ್ಪಾಲ್ ಸುವರ್ಣ, ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಎಸ್. ಸಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ದಿನಕರ ಬಾಬು, ಉಡುಪಿ ನಗರ ಪ್ರಧಾನ ಕಾರ್ಯದರ್ಶಿಗಳಾದ ಜಗದೀಶ್ ಆಚಾರ್ಯ ಕಪ್ಪೆಟ್ಟು, ರಶ್ಮಿತಾ ಬಿ. ಶೆಟ್ಟಿ ಹಾಗೂ ಮಂಡಲ ವಿಶೇಷ ಕಾರ್ಯಕಾರಿಣಿ ಸಭೆಯ ಅಪೇಕ್ಷಿತರು ಉಪಸ್ಥಿತರಿದ್ದರು.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ