ಕುಂಜಾರುಗಿರಿ ಚಿರತೆ ಹಿಡಿಯಲು ಯಶಸ್ವಿ ಕಾರ್ಯಾಚರಣೆ : ಚಿರತೆ ಭಯದಿಂದ ನಿಟ್ಟುಸಿರಿಟ್ಟ ಗ್ರಾಮಸ್ಥರು

ಉಡುಪಿ : ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕುಂಜಾರುಗಿರಿ ಪರಿಸರದಲ್ಲಿ ರಾಶಿ ಹಾಕಿದ ಶಿಲೆ ಕಲ್ಲುಗಳಲ್ಲಿ ವಾಸವಾಗಿದ್ದ ಚಿರತೆಯನ್ನು ಕೊನೆಗೂ ಯಶಸ್ವಿಯಾಗಿ ಸರೆ ಹಿಡಿಯಲಾಗಿದೆ.

ಈ ಪರಿಸರದಲ್ಲಿ ಬಹಳ ದಿನಗಳಿಂದ ಗ್ರಾಮಸ್ಥರು ಭಯದಿಂದ ಓಡಾಟ ನಡೆಸುತ್ತಿದ್ದರು. ಚಿರತೆ ಭಯದಿಂದಾಗಿ ಈ ಪರಿಸರದ ಅಂಗನವಾಡಿಗಳಿಗೆ ರಜೆಯನ್ನೂ ನೀಡಲಾಗಿತ್ತು. ರಾತ್ರಿ ಆಗುವ ಮೊದಲೇ ಗ್ರಾಮಸ್ಥರು ತಮ್ಮ ಮನೆಯಿಂದ ಹೊರಬರಲು ಭಯಪಡುತ್ತಿದ್ದರು.

ಇದೀಗ ಅರಣ್ಯ ಇಲಾಖೆ ಇಲ್ಲಿ ಬೋನನ್ನು ಇರಿಸಿ ಚಿರತೆಯನ್ನು ಸೆರೆಹಿಡಿಯುವುದರೊಂದಿಗೆ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ