ಪಶ್ಚಿಮ ಘಟ್ಟ ತಪ್ಪಲಲ್ಲಿ ಕಾರ್ಕಳ ಶಾಸಕ ಸುನಿಲ್ ಗ್ರಾಮ ವಾಸ್ತವ್ಯ

ಕಾರ್ಕಳ : ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಪಶ್ಚಿಮ ಘಟ್ಟ ಅದಿವಾಸಿಗಳ ಮನೆಯಲ್ಲಿ ರಾತ್ರಿ ವಾಸ್ತವ್ಯ ಮಾಡಿ ಜನರ ಸಂಕಷ್ಟವನ್ನು ಆಲಿಸಿದ್ದಾರೆ.

ಕಾರ್ಕಳ ತಾಲೂಕು ಈದುವಿನ ಆದಿವಾಸಿಗರ ಮನೆಯಲ್ಲಿ ಗ್ರಾಮ ವಾಸ್ತವ್ಯ ನಡೆಸಿದರು. ಇದು ನಕ್ಸಲ್ ಬಾಧಿತ ಪ್ರದೇಶವಾಗಿಯೂ ಗುರುತಿಸಿಕೊಂಡಿದ್ದು, ಹೊಸ್ಮಾರುವಿನಿಂದ 15 ಕಿ.ಮೀ ದೂರದ ಈದು ಗ್ರಾಮದ ಕಗ್ಗತ್ತಲು ಕಾಡಿನೊಳಗಿನ ಪ್ರದೇಶಕ್ಕೆ ಭೇಟಿ ನೀಡಿ ಜನರೊಂದಿಗೆ ಕಾಲ ಕಳೆದರು. ಕಾಡಿನೊಳಗೆ ವಾಸವಿದ್ದ ಪರಿಸರದ ನಿವಾಸಿಗಳ ನಾನಾ ಸಮಸ್ಯೆಗಳಿಗೆ ಶಾಸಕರು ಸ್ಪಂದಿಸಿದರು. ಶಾಸಕರ ಗ್ರಾಮವಾಸ್ತವ್ಯಕ್ಕೆ ಯಾವುದೇ ಸಿದ್ಧತೆ, ತಯಾರಿಯೂ ನಡೆದಿರಲಿಲ್ಲ.

ಆದಿವಾಸಿ ಸಮುದಾಯದ ದಿನೇಶ್ ಗೌಡ ಅವರ ಮನೆಯಲ್ಲಿ ಶಾಸಕರು ವಾಸ್ತವ್ಯ ಹೂಡಿ ಊಟೋಪಚಾರ ಮಾಡಿದರು. ಇಲ್ಲಿನ ದಟ್ಟ ಅರಣ್ಯದ ನಡುವೆ 11 ಆದಿವಾಸಿ ಮಲೆಕುಡಿಯ ಸಮುದಾಯದ ಕುಟುಂಬಗಳು ವಾಸವಾಗಿವೆ. ಇವರೆಲ್ಲ ಕೃಷಿ ಅವಲಂಬಿತರಾಗಿದ್ದು, ಜಾನುವಾರು ಸಾಕಾಣೆ, ಕೋಳಿ ಸಾಕಣೆ ಮಾಡಿಕೊಂಡಿದ್ದಾರೆ. ಕೋಳಿ ಸಾಕಾಣಿಕೆ ಮಾಡಿಕೊಂಡು ಸಾವಯವ ಕೃಷಿಗೆ ಒತ್ತುಕೊಟ್ಟು ಸಾಗಿಸುತ್ತಿದ್ದಾರೆ. ಕಾಡಿನ ನಿವಾಸಿಗಳ ಶ್ರಮದ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

Related posts

₹ 5 ಲಕ್ಷ ವೆಚ್ಚದಲ್ಲಿ ನವೀಕೃತ ಅಂಬಾಗಿಲು ಮೀನು ಮಾರುಕಟ್ಟೆ ಉದ್ಘಾಟನೆ

ಮಲ್ಪೆಯಲ್ಲಿ ನವಜಾತ ಶಿಶು ಶವಪತ್ತೆ ಪ್ರಕರಣ; ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಮಾಹಿತಿ

ಸಾಮಾಜಿಕ ಸಮಾನತೆ ಮತ್ತು ಸಹಬಾಳ್ವೆ ಅಂಬೇಡ್ಕರ್‌ರವರ ಆಶಯವಾಗಿತ್ತು : ಜಯನ್ ಮಲ್ಪೆ