ಸುರತ್ಕಲ್ ಬೀಚ್ ರೋಡ್ ಕುಸಿತ, ಶಾಸಕರ ಭೇಟಿ

ಸುರತ್ಕಲ್ : ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಸುರತ್ಕಲ್ ಲೈಟ್ ಹೌಸ್ ಮತ್ತು ಎನ್‌ಐಟಿಕೆ ಸಂಪರ್ಕಿಸುವ ರಸ್ತೆ ಕುಸಿದಿದ್ದು ಶಾಸಕ ಡಾ. ಭರತ್ ಶೆಟ್ಟಿ ವೈ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆ.29ರಂದು ಬಿರುಕು ಬಿಟ್ಟ ಸ್ಥಿತಿಯಲ್ಲಿತ್ತು. ಶನಿವಾರ ರಸ್ತೆಯ ಅಡಿಭಾಗ ಕುಸಿದು ಡಾಮರು ರಸ್ತೆಯೂ ಅಪಾಯದಲ್ಲಿದೆ. ವಾಹನ ಸಂಚಾರ ನಿಷೇಧಿಸಲಾಗಿದ್ದು, ಹೆಚ್ಚಿನ ಹಾನಿಯಾಗದಂತೆ ಮರಳು ಚೀಲವಿಟ್ಟು ಸುರಕ್ಷತೆ ಒದಗಿಸಲು ಶಾಸಕ ಡಾ. ಭರತ್ ಶೆಟ್ಟಿ ವೈ ಸೂಚಿಸಿದರಲ್ಲದೆ, ರಸ್ತೆಯ ನಿರ್ಮಾಣಕ್ಕೂ ಪೂರಕ ಯೋಜನೆ ರೂಪಿಸಲು ಅಧಿಕಾರಿಗಳಿಗೆ ಸಲಹೆ ನೀಡಿದರು. ಮನಪಾ ಸದಸ್ಯರಾದ ಶ್ವೇತ ಪೂಜಾರಿ, ಶೋಭಾ ರಾಜೇಶ್, ಬಿಜೆಪಿ ಪ್ರಮುಖರಾದ ದಿನಕರ್ ಇಡ್ಯಾ, ರಾಜೇಶ್ ಮುಕ್ಕ, ರಾಘವೇಂದ್ರ ಶೆಣೈ , ಪುಷ್ಪರಾಜ್ ಮುಕ್ಕ ಮತ್ತಿತರರಿದ್ದರು.

Related posts

National Fame Award of India Books of Award – Sushanth Brahmavar

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ