ಕಾಪು : ಉಡುಪಿಯ ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ಅದ್ಧೂರಿಯಾಗಿ ಬ್ರಹ್ಮ ಕಲಶೋತ್ಸವ ನಡೆಯುತ್ತಿದೆ. ಹತ್ತು ದಿನಗಳ ಕಾಲ ನಡೆಯುವ ಈ ಮಹೋತ್ಸವದ ವೇಳೆ ಪ್ರತಿದಿನ ಸಾವಿರಾರು ಜನರಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ.
ಅನ್ನ ಸಂತರ್ಪಣೆಗೆಂದು ಹೊರೆ ಕಾಣಿಕೆಯನ್ನು ಭಕ್ತರು ನೀಡುತ್ತಿದ್ದಾರೆ. ಇದೀಗ ಎಲ್ಲಾ ಸಮುದಾಯಗಳ ಜೊತೆಗೆ ಮುಸ್ಲಿಮರು ಕೂಡ ಹೊರೆ ಕಾಣಿಕೆ ಸಮರ್ಪಿಸಿದ್ದಾರೆ. ಕಾಪು ತಾಲೂಕಿನಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿರುವ ಮುಸ್ಲಿಂ ಸಮುದಾಯದವರು, ಈ ಮೂಲಕ ಮಾರಿಗುಡಿಯ ಬ್ರಹ್ಮಕಲಶೋತ್ಸವದಲ್ಲಿ ಭಾಗಿಯಾಗಿದ್ದಾರೆ. ಮುಸ್ಲಿಂ ಸಮುದಾಯದವರು ಹೊರೆ ಕಾಣಿಕೆ ನೀಡುವ ಮೂಲಕ, ಹೊಸ ಸೌಹಾರ್ದದ ಸಂದೇಶ ಸಾರಿದ್ದಾರೆ. ಅಂದಾಜು 30 ಕೋಟಿ ವೆಚ್ಚದಲ್ಲಿ ಕಾಪು ಹೊಸ ಮಾರಿಗುಡಿಯ ಮೊದಲ ಹಂತದ ದೇವಾಲಯ ಅಭಿವೃದ್ಧಿ ಕಾರ್ಯ ನಡೆದಿದೆ.