ಮಂಗಳೂರು : ‘ಉದ್ಯಮಶೀಲತೆ ಅಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರಃ ಒಂದು ಅಧ್ಯಯನ’ ಎಂಬ ಪ್ರೌಢ ಪ್ರಬಂಧಕ್ಕಾಗಿ ವಾಣಿಜ್ಯ ವಿಭಾಗದ ಸಂಶೋಧಕ ರಾಘವೇಂದ್ರ ಅವರಿಗೆ ಮಂಗಳೂರು ವಿಶ್ವವಿದ್ಯಾಲಯ ಡಾಕ್ಟರೇಟ್ ಆಫ್ ಫಿಲಾಸಫಿ (ಪಿಎಚ್ಡಿ) ಪದವಿ ನೀಡಿದೆ. ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರಿನ ನಿವೃತ್ತ ಸಹ ಪ್ರಾಧ್ಯಾಪಕ ಉದಯಕುಮಾರ್ ಎಂ.ಎ, ಸಂಶೋಧಕರಿಗೆ ಯಶಸ್ವಿಯಾಗಿ ಮಾರ್ಗದರ್ಶನ ನೀಡಿದ್ದಾರೆ.
