ಉಡುಪಿ : ಕರಾವಳಿಯಲ್ಲಿ ಕಾಂಗ್ರೆಸ್ ಸೋಲಿನ ಬೆನ್ನಲ್ಲೇ ಜಿಲ್ಲಾ ಉಸ್ತುವಾರಿಗಳ ವಿರುದ್ಧ ಗರಂ ಆಗಿರುವ ಕಾಂಗ್ರೆಸ್ ಕಾರ್ಯಕರ್ತರು, ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ʼಗೋ ಬ್ಯಾಕ್ʼ ಅಭಿಯಾನ ಕೈಗೊಂಡಿದ್ದಾರೆ. ಈ ಸಂಬಂಧ
ಸಾಮಾಜಿಕ ಜಾಲತಾಣದಲ್ಲಿ ‘ಗೋ ಬ್ಯಾಕ್ʼ ಅಭಿಯಾನದ ಸದ್ದು ಜೋರಾಗಿದೆ. ಮುಖ್ಯವಾಗಿ ಉಡುಪಿಯ ಕೈ ಕಾರ್ಯಕರ್ತರು
ಉಡುಪಿ ಜಿಲ್ಲಾ ಉಸ್ತುವಾರಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗರಂ ಆಗಲು ಇನ್ನೊಂದು ಕಾರಣ ಅವರು ಜಿಲ್ಲೆಯನ್ನು ನಿರ್ಲಕ್ಷ್ಯ ಮಾಡಿದ್ದು. ಚುನಾವಣೆ ಘೋಷಣೆ ಆದಾಗಿನಿಂದ ಹೆಬ್ಬಾಳ್ಕರ್ ಜಿಲ್ಲೆಗೇ ಕಾಲಿಟ್ಟಿರಲಿಲ್ಲ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಎರಡೂವರೆ ಲಕ್ಷ ಮತಗಳ ಅಂತರದಿಂದ ಸೋತಿದ್ದಾರೆ. ಈ ಎಲ್ಲ ಸಿಟ್ಟನ್ನು ಕೈ ಕಾರ್ಯಕರ್ತರು ಗೋ ಬ್ಯಾಕ್ ಅಭಿಯಾನ ಹಮ್ಮಿಕೊಳ್ಳುವ ಮೂಲಕ ಹೊರ ಹಾಕಿದ್ದಾರೆ. ಮಾತ್ರವಲ್ಲ, ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಿಸುವಂತೆಯೂ ಒತ್ತಾಯ ಮಾಡಿದ್ದಾರೆ.
Congress
ದ.ಕ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ; ನಿರ್ಗಮಿತ ಸಂಸದ ನಳಿನ್ ಕುಮಾರ್ ಕಟೀಲ್ ಸಂತಸ
ಮಂಗಳೂರು : ದ.ಕ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ನಿರ್ಗಮಿತ ಸಂಸದ ನಳಿನ್ ಕುಮಾರ್ ಕಟೀಲ್ ಸಂತಸ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು ಜಿಲ್ಲೆಯ ಜನ ಬಿಜೆಪಿಯ ಕೈ ಹಿಡಿದಿದ್ದಾರೆ. ಕ್ಯಾ.ಬ್ರಿಜೇಶ್ ಚೌಟ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮುಂದಿನ ವರ್ಷಗಳಲ್ಲಿ ಅವರಿಗೆ ಅಭಿವೃದ್ಧಿ ಮಾಡುವ ಅವಕಾಶ ಇದೆ. ಸಂಪೂರ್ಣವಾಗಿ ಅಭಿವೃದ್ಧಿ ಮಾಡುವ ವಿಶ್ವಾಸ ಇದೆ. ಕೋಟಾ ಅವರಿಗೂ ಅಭಿನಂದನೆ ಸಲ್ಲಿಸುತ್ತೇನೆ. ರಾಜ್ಯದಲ್ಲಿ ಹದಿನೇಳು ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆಯಲ್ಲಿದೆ. ರಾಜ್ಯದಲ್ಲಿ ಬಿಜೆಪಿ ಮುನ್ನಡೆಯ ಹಾದಿಯಲ್ಲಿದೆ ಎಂದರು.
ಕಳೆದ ಬಾರಿಗಿಂತ ಕಡಿಮೆ ಅಂತರದ ಗೆಲುವು ಹಿನ್ನಲೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಸಹಜವಾಗಿ ಚುನಾವಣೆಯಲ್ಲಿ ವ್ಯತ್ಯಾಸಗಳಾಗುತ್ತದೆ. ಈ ಬಾರಿ ಕಾಂಗ್ರೆಸ್ ಗ್ಯಾರಂಟಿ, ಆಶ್ವಾಸನೆಗಳನ್ನು ನೀಡಿದೆ. ಆದರೂ ಬಿಜೆಪಿ ಒಂದೂವರೆ ಲಕ್ಷ ಮತಗಳ ಅಂತರದ ಜಯ ಪಡೆದಿದೆ ಎಂದರು.
ನಾನು ಕೇರಳದ ಸಹ ಪ್ರಭಾರಿಯಾಗಿ ಕೆಲಸ ಮಾಡಿದ್ದೆ. ಬಿಜೆಪಿ ಕೇರಳದಲ್ಲಿ ತನ್ನ ಅಕೌಂಟ್ ತೆರೆದಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ದ.ಕ.ಜಿಲ್ಲಾ ಎಸ್ಪಿಯಿಂದ ಕಾಂಗ್ರೆಸ್ ವಕ್ತಾರನಂತೆ ಹೇಳಿಕೆ – ಶಾಸಕ ಹರೀಶ್ ಪೂಂಜಾ ಆರೋಪ
ಮಂಗಳೂರು : ದ.ಕ.ಜಿಲ್ಲಾ ಎಸ್ಪಿ ರಿಷ್ಯಂತ್ ಅವರು ಓರ್ವ ಐಎಎಸ್ ಅಧಿಕಾರಿಯಂತೆ ಹೇಳಿಕೆ ನೀಡುವ ಬದಲು ಧರ್ಮಸ್ಥಳದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ವಕ್ತಾರನಂತೆ ಹೇಳಿಕೆ ನೀಡಿದ್ದಾರೆ ಎಂದು ಶಾಸಕ ಹರೀಶ್ ಪೂಂಜಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು
ನಗರದ ಖಾಸಗಿ ಹೊಟೇಲ್ನಲ್ಲಿ ಮಾತನಾಡಿದ ಅವರು, ನನ್ನ ಮನೆಗೆ ಅಂದು ಮೂವರು ಪೋಲಿಸರು ನೋಟಿಸ್ ನೀಡಲು ಬಂದಿದ್ದರು ಅವರು ಹೇಳಿದ್ದಾರೆ. ಆದರೆ ಎಷ್ಟು ಮಂದಿ ಬಂದಿದ್ದಾರೆಂದು ನಮ್ಮ ಮನೆಯ ಸಿಸಿ ಟಿವಿ ಪರಿಶೀಲನೆ ನಡೆಸಿದರೆ ಗೊತ್ತಾಗುತ್ತದೆ. ಮೂರು ವಾಹನದಲ್ಲಿ 15ಕ್ಕೂ ಅಧಿಕ ಪೊಲೀಸರು ಬಂದಿದ್ದರು. ನನ್ನನ್ನು ಅರೆಸ್ಟ್ ಮಾಡಿ ಕರೆದುಕೊಂಡು ಹೋಗುತ್ತೇನೆ ಎಂದಿದ್ದರು. ಆದರೆ ಕಾನೂನು ಪ್ರಕಾರ ಅವರು ನನಗೆ ನೋಟಿಸ್ ನೀಡಲಿಲ್ಲ. ಆದರೆ ಪೊಲೀಸ್ ಠಾಣೆಗೆ ಬರಬೇಕೆಂದು ಬೆಳಗ್ಗೆಯಿಂದ ಸಂಜೆ ಏಳರವರೆಗೆ ದೌರ್ಜನ್ಯ ಮಾಡಿದ್ದಾರೆ ಎಂದರು.
ಶಶಿರಾಜ್ ಶೆಟ್ಟಿ ಅಮಾಯಕ. ಅವನನ್ನು ಹೇಗೆ ಜೈಲಿಗೆ ಹಾಕಿದ್ದಾರೆ. ಎಸ್ಪಿಯವರು ಆಮೇಲೆ ಕಾಗಕ್ಕ ಗೂಬಕ್ಕನ ಕಥೆ ಹೇಳುತ್ತಾರೆ. ದೇಶದಲ್ಲಿ ಪೊಲೀಸ್ ಠಾಣೆಯ ಮುಂಭಾಗ ಪ್ರತಿಭಟನೆ ನಡೆದೇ ಇಲ್ಲವೇ. ಕಲ್ಲು ಗಣಿಗಾರಿಕೆ ನಡೆದದ್ದು ಯಾವ ಸ್ಥಳದಲ್ಲಿ ಇದೆ ಅನ್ನೋದನ್ನು ತನಿಖೆ ಮಾಡಬೇಕೆಂದು ಎಸ್ಪಿ ಹೇಳಿದ್ದಾರೆ. ಆ್ಯಪ್ನಲ್ಲಿ ನೋಡಿದ್ದಲ್ಲಿ ಗೊತ್ತಾಗುದಿಲ್ವಾ. ಅಂತಹ ಸಾಮಾನ್ಯ ಜ್ಞಾನ ಎಸ್ಪಿ ಅವರಿಗೆ ಇಲ್ವಾ. ಅಲ್ಲದೆ ನನ್ನ ಮೇಲೆ ಮೂರು ದಿನಗಳಲ್ಲೇ ಜಾರ್ಜ್ ಶೀಟ್ ಮಾಡಿ ಇತಿಹಾಸ ನಿರ್ಮಿಸಿದ್ದಾರೆ ಎಂದು ಹರೀಶ್ ಪೂಂಜಾ ಆಕ್ರೋಶ ವ್ಯಕ್ತಪಡಿಸಿದರು.