Disaster Relief
ಕುಂದಾಪುರ : ಪಶ್ಚಿಮಘಟ್ಟದ ತಪ್ಪಲಿನ ಪ್ರದೇಶವಾದ ಹೆಬ್ರಿ, ಕುಂದಾಪುರ ಭಾಗದಲ್ಲಿ ಬುಧವಾರ ಬೀಸಿದ ಸುಂಟರಗಾಳಿಗೆ ಅಪಾರ ಪ್ರಮಾಣದ ಕೃಷಿ, ಮನೆ, ದನದ ಕೊಟ್ಟಿಗೆಗಳು, ನೂರಾರು ವಿದ್ಯುತ್ ಕಂಬಗಳಿಗೆ ಹಾನಿಯಾಗಿಯಾಗಿದೆ. ಇದರಿಂದ ಕೋಟ್ಯಂತರ ರೂಪಾಯಿ ನಷ್ಟ ಸಂಭವಿಸಿದೆ.

ಶಂಕರನಾರಾಯಣ ಗ್ರಾ.ಪಂಚಾಯತ್ ವ್ಯಾಪ್ತಿಯಲ್ಲಿ ಎರಡು ಮನೆ, ದನದ ಕೊಟ್ಟಗೆ ಮತ್ತು ಅಪಾರ ಕೃಷಿ ಹಾನಿಗೀಡಾಗಿದೆ. ಕುಳ್ಳುಂಜೆ ಗ್ರಾಮದಲ್ಲೂ ಮನೆಗೆ ಹಾನಿಯಾಗಿದೆ. ಇಲ್ಲಿ ದನದ ಕೊಟ್ಟಿಗೆ ಗಾಳಿಗೆ ಹಾರಿ ಹೋಗಿದ್ದು, ಸಂಪೂರ್ಣ ಹಾನಿಗೊಂಡಿದೆ. 1,000ಕ್ಕೂ ಹೆಚ್ಚು ಅಡಿಕೆ ಮರ, 50ಕ್ಕೂ ಹೆಚ್ಚು ತೆಂಗಿನ ಮರ, ಅಪಾರ ಪ್ರಮಾಣದ ಬಾಳೆ, ಗೇರು ಕಾಳು ಮೆಣಸು ಗಿಡಗಳು ಹಾನಿಗೊಂಡಿವೆ. ಸುಶೀಲಾ ಎಂಬ ಮಹಿಳೆಗೆ ಗಾಯಗಳಾಗಿದ್ದು, ಪುತ್ರಿ ಪ್ರೇಮಾನಾಯ್ಕ ಅವರ ಕಾಲಿಗೆ ಗಂಭೀರ ಸ್ವರೂಪದ ಗಾಯವಾಗಿದೆ ಎಂದು ವರದಿಯಾಗಿದೆ.
ಕುಳ್ಳುಂಜೆ ಗ್ರಾಮದ ಗುಲಾಬಿ ನಾಯ್ಕ ಅವರು ಅಡಿಕೆ ತೋಟವು ಸುಂಟರಗಾಳಿಗೆ ಹಾನಿಗೊಂಡಿವೆ. 600ಕ್ಕೂ ಹೆಚ್ಚು ಅಡಿಕೆ ಮರ ಹಾನಿಗೊಂಡಿವೆ. ಸುಮಾರು 2 ಲಕ್ಷ ರೂ.ಗೂ ಹೆಚ್ಚು ಹಾನಿ ಸಂಭವಿಸಿದೆ.
ಅಮಾಸೆಬೈಲು ಗ್ರಾಮ ಪಂಚಾಯತ್ ವ್ಯಾಪ್ತಿಯ ರಟ್ಟಾಡಿ, ತೆಂಕೂರು, ಹೊರ್ಲಿಜೆಡ್ಡು ನಡಂಬೂರು, ಹಳೆ ಅಮಾಸೆಬೈಲು, ಜಡ್ಡಿನಗದ್ದೆ ಪ್ರದೇಶದಲ್ಲಿ ಬೀಸಿದ ಸುಂಟರಗಾಳಿ ಅಪಾರ ಪ್ರಮಾಣದಲ್ಲಿ ಮನೆಗಳು ಮತ್ತು ಕೃಷಿಗೆ ಹಾನಿ ಸಂಭವಿಸಿದೆ.