ಮಂಗಳೂರು : ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ತಾಲೂಕು ಸಮಿತಿ, ಮಹಿಳಾ ಘಟಕ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನ ಕೇಂದ್ರ ಹಾಗೂ ಎಲ್ಲಾ ಶಾಲಾ ಕಾಲೇಜು ಶಿಕ್ಷಣ ಸಂಸ್ಥೆಗಳ ಸಹಯೋಗದೊಂದಿಗೆ ಮಾದಕದ್ರವ್ಯ ವ್ಯಸನಮುಕ್ತ ಮಂಗಳೂರು ಜಾಥಾ ನವೆಂಬರ್ 14ರ ಗುರುವಾರ ಸಂಜೆ 3 ಗಂಟೆಗೆ ಎಸ್.ಡಿ.ಎಂ. ಕಾನೂನು ಕಾಲೇಜು ಸಭಾಂಗಣದಲ್ಲಿ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.
Drug Prevention
ಉಡುಪಿ : ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ಜಬ್ಬಾರ್ ಬಂಧಿತ ಆರೋಪಿ.
ಪೆರಂಪಳ್ಳಿಯ ಬಳಿ ಆರೋಪಿಯು ಸ್ಕೂಟರ್ನಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಬೆನ್ನಿಗೆ ಹಾಕುವ ಚೀಲದಲ್ಲಿ ಮಾರಾಟ ಮಾಡಲು ನಿಂತಿದ್ದ. ಕೂಡಲೇ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡು ಆತನಿಂದ ಕಾನೂನು ಬಾಹಿರವಾಗಿ ಮಾರಾಟ ಮಾಡಲು ಹೊಂದಿದ್ದ 2.344 ಕೆ.ಜಿ. ತೂಕದ ಗಾಂಜಾ, ಮೊಬೈಲ್ ಪೋನ್, ಗಾಂಜಾವನ್ನು ಸಾಗಾಟ ಮಾಡಲು ಬಳಸಿದ್ದ ಬ್ಯಾಗ್, ಪ್ಲಾಸ್ಟಿಕ್ ಕವರ್, ತೂಕದ ಯಂತ್ರ, ಚೂರಿ, 5810 ರೂ. ಮತ್ತು ಗಾಂಜಾ ಸಾಗಾಟಕ್ಕೆ ಬಳಸಿರುವ ಸ್ಕೂಟರ್ ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿಯು ಅಕ್ರಮ್ ಭಟ್ಕಳ ಎಂಬಾತನಿಂದ ಗಾಂಜಾ ಖರೀದಿಸಿರುವ ಬಗ್ಗೆ ಮಾಹಿತಿ ನೀಡಿದ್ದಾನೆ. ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಎಕ್ಸಲೆಂಟ್ ಕಾಲೇಜು ಸುಣ್ಣಾರಿಯಲ್ಲಿ ಕಾನೂನು ಅರಿವು ಮತ್ತು ನಶಾ ಮುಕ್ತ ಭಾರತ ಕುರಿತು ಮಾಹಿತಿ ಕಾರ್ಯಕ್ರಮ
ಕುಂದಾಪುರ : ಎಕ್ಸಲೆಂಟ್ ಕಾಲೇಜು ಸುಣ್ಣಾರಿಯಲ್ಲಿ ಕಾನೂನು ಅರಿವು ಮತ್ತು ನಶಾ ಮುಕ್ತ ಭಾರತ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಮತ್ತು ನಶೆಮುಕ್ತ ಭಾರತ ಈ ವಿಷಯದ ಬಗ್ಗೆ ಮಾಹಿತಿಯನ್ನು ಕೋಟ ಪೊಲೀಸ್ ಠಾಣೆಯ ಪಿಎಸ್ಐ ಗುರುನಾಥ್ ಬಿ ಹಾದಿಮನಿ ಅವರು ಮಾಹಿತಿಯನ್ನು ನೀಡಿದರು. ಮಾದಕ ದ್ರವ್ಯದ ವ್ಯಸನದಿಂದ ಯಾವ ರೀತಿ ನಮ್ಮ ದೇಹದ ಮೇಲೆ ನರಮಂಡಲದ ಮೇಲೆ ಪರಿಣಾಮ ಬೀರುತ್ತದೆ ಯಾವೆಲ್ಲ ದುಷ್ಪರಿಣಾಮಗಳು ವ್ಯಕ್ತಿಗಳಿಗೆ ಹಾಗೂ ಅವರ ಕುಟುಂಬಕ್ಕೆ ಮತ್ತು ಸಮಾಜಕ್ಕೆ ಆಗುತ್ತದೆ ಇದರ ಬಗ್ಗೆ ಸುಧೀರ್ಘ ಮಾಹಿತಿಯನ್ನು ಕೋಟ ಪಿಎಸ್ಐ ನೀಡಿದರು. ಅಲ್ಲದೆ ಸುಣ್ಣಾರಿಯ ಎಕ್ಸಲೆಂಟ್ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ತಯಾರಿಯ ಜೊತೆಗೆ ಪಠ್ಯೇತರ ಚಟುವಟಿಕೆ ಮಾತ್ರ ಅಲ್ಲ ವಿದ್ಯಾರ್ಥಿಗಳಿಗೆ ಇವತ್ತಿನ ಸಾಮಾಜಿಕವಾದ ಸವಾಲಿನ ಬಗ್ಗೆ ಅರಿವು ಮೂಡಿಸುವಂಥ ಅನೇಕ ಶಿಬಿರಗಳನ್ನು ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾರ್ಯೊನ್ಮುಖರಾಗಿದ್ದೇವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ನಾಗರಾಜ್ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಇವತ್ತಿನ ಯುವಜನತೆ ಮಾದಕ ದ್ರವ್ಯದ ವ್ಯಸನಗಳಿಗೆ ಅಧಿಕವಾಗಿ ಬಲಿಯಾಗುತ್ತಿದ್ದಾರೆ ನಾವು ಇವತ್ತು ವಿದ್ಯಾರ್ಥಿಗಳನ್ನು ಒಬ್ಬ ವೈದ್ಯ, ಇಂಜಿನಿಯರ್, ಕಂಪನಿ ಸೆಕ್ರೆಟರಿ, ಸಿಎ ಇಂಥ ನೂರಾರು ಹುದ್ದೆಗಳಿಗೆ ತಯಾರು ಮಾಡುವ ಮೊದಲು ನಾವು ಸಮಾಜಕ್ಕೆ ಉತ್ತಮ ಪ್ರಜೆಯನ್ನು ರೂಪಿಸುವಂತ ಜವಾಬ್ದಾರಿ ನಮ್ಮಂತ ಶಿಕ್ಷಣ ಸಂಸ್ಥೆಗೆ ಇದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಎಂ. ಎಂ ಹೆಗ್ಡೆ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ಹಾಗೂ ಎಕ್ಸಲೆಂಟ್ ಪಿಯು ಕಾಲೇಜ್ನ ಅಧ್ಯಕ್ಷರಾಗಿರುವ ಎಂ. ಮಹೇಶ್ ಹೆಗ್ಡೆಯವರು ಸಭೆಯ ಅಧ್ಯಕ್ಷೀಯ ಮಾತನಾಡಿ ನಮ್ಮ ಸಂಸ್ಥೆ ಪಾಠದ ಜೊತೆಗೆ ಸಮಾಜದಲ್ಲಿ ಬದುಕನ್ನು ಹೇಗೆ ಕಟ್ಟಿಕೊಳ್ಳಬೇಕು ಒಬ್ಬ ಸಜ್ಜನ ವ್ಯಕ್ತಿಯನ್ನು ಹೇಗೆ ರೂಪಿಸಬೇಕು ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.
ಕಾರ್ಯಕ್ರಮದಲ್ಲಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯನಿಯಾದ ಶ್ರೀಮತಿ ಸರೋಜಿನಿ ಪಿ ಆಚಾರ್ಯ ಅವರು ಕಾರ್ಯಕ್ರಮಕೆ ಸ್ವಾಗತ ಭಾಷಣವನ್ನು ಮಾಡಿದರು ಹಾಗೆ ಇಂಗ್ಲಿಷ್ ಉಪನ್ಯಾಸಕರಾದ ಪ್ರಕಾಶ್ ಆಚಾರ್ಯ ಕಾರ್ಯಕ್ರಮದ ನಿರೂಪಿಸಿದರು, ಪ್ರೌಢಶಾಲಾ ಶಿಕ್ಷಕಿ ಪೃಥ್ವಿ ವಂದಿಸಿದರು.
ಅಂತಾರಾಷ್ಟ್ರೀಯ ಮಾದಕದ್ರವ್ಯ ವ್ಯಸನ ಮತ್ತು ಅಕ್ರಮ ಸಾಗಾಟ ವಿರೋಧಿ ದಿನ ಪ್ರಯುಕ್ತ ಕಾರ್ಯಾಗಾರ
ಉಡುಪಿ : ಅಂತಾರಾಷ್ಟ್ರೀಯ ಮಾದಕದ್ರವ್ಯ ವ್ಯಸನ ಮತ್ತು ಅಕ್ರಮ ಸಾಗಾಟ ವಿರೋಧಿ ದಿನದ ಪ್ರಯುಕ್ತ ಮಾಹಿತಿ ಕಾರ್ಯಗಾರವು ಡಾ. ಎ ವಿ ಬಾಳಿಗ ಸ್ಮಾರಕ ಆಸ್ಪತ್ರೆಯ ಕಮಲ್ ಎ ಬಾಳಿಗ ಸಭಾಂಗಣದಲ್ಲಿ ನಡೆಯಿತು.

ಈ ವರ್ಷದ ಧ್ಯೇಯ ವಾಕ್ಯ The evidence is clear :invest in prevention ಈ ಮಾಹಿತಿ ಕಾರ್ಯಗಾರವನ್ನು ರೋಟರಿಯನ್ PHF ದೀಪ ಭಂಡಾರಿ ಅಧ್ಯಕ್ಷರು ರೋಟರಿ ಉಡುಪಿ ಇವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ರೋಟರಿಯನ್ PHF ಶುಭ ಬಾಶ್ರೀ ಕಾರ್ಯದರ್ಶಿ ರೋಟರಿ ಉಡುಪಿ ಮತ್ತು ಶ್ರೀಮತಿ ಶ್ರೀಲತಾ ಉಪನ್ಯಾಸಕರು ವಿದ್ಯಾರತ್ನ ನರ್ಸಿಂಗ್ ಕಾಲೇಜು ಇವರು ಆಗಮಿಸಿದ್ದರು. ಡಾ ಎ ವಿ ಬಾಳಿಗ ಸಮೂಹ ಸಂಸ್ಥೆಯ ವೈದ್ಯಕೀಯ ನಿರ್ದೇಶಕರಾದ ಡಾ ಪಿ ವಿ ಭಂಡಾರಿ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ವೇದಿಕೆಯಲ್ಲಿ ಡಾ. ಎ ವಿ ಬಾಳಿಗ ಸ್ಮಾರಕ ಆಸ್ಪತ್ರೆಯ ಮನೋವೈದ್ಯರಾದ ಡಾ. ದೀಪಕ್ ಮಲ್ಯ, ಡಾ. ಮಾನಸ್ ಆರ್ ಮತ್ತು ಆಸ್ಪತ್ರೆಯ ಆಡಳಿತ ಅಧಿಕಾರಿಯಾದ ಶ್ರೀಮತಿ ಸೌಜನ್ಯ ಶೆಟ್ಟಿ ಇವರು ಉಪಸ್ಥಿತರಿದ್ದರು. ಶ್ರೀ ಸ್ರವಣ್ ವಿದ್ಯಾರ್ಥಿ ಎಂ ವಿ ಶೆಟ್ಟಿ ಕಾಲೇಜ್ ಮಂಗಳೂರು ಇವರು ಕಾರ್ಯಕ್ರಮಕ್ಕೆ ಪ್ರಾರ್ಥಿಸಿದರು. ಕುಮಾರಿ ಫ್ಲಾವಿಯ ವಿದ್ಯಾರ್ಥಿನಿ ಕ್ರಿಸ್ತು ಜಯಂತಿ ಬೆಂಗಳೂರು ಇವರು ಸ್ವಾಗತಿಸಿದರು. ಸೈಂಟ್ ಆಗ್ನೆಸ್ ಪಿ ಜಿ ಕಾಲೇಜ್ ಮಂಗಳೂರು ಇಲ್ಲಿನ ವಿದ್ಯಾರ್ಥಿನಿಯಾರಾದ ಕುಮಾರಿ ನಿಸರ್ಗ ಇವರು ವಂದಿಸಿದರು. ಹಾಗೂ ಕುಮಾರಿ ರಚನ ರೂತ್ ಡಿ ಇವರು ಕಾರ್ಯಕ್ರಮವನ್ನು ನಿರೂಪಿಸಿದರು.
ಸಭಾ ಕಾರ್ಯಕ್ರಮದ ನಂತರ ವಿದ್ಯಾರತ್ನ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಮಾದಕ ವ್ಯಸನ ಹಾಗೂ ಅದರ ಅಪಾಯದ ಕುರಿತಾಗಿ ಮೂಕಾಭಿನಯ ಮತ್ತು ಪ್ರಹಸನ ಪ್ರದರ್ಶಿಸಿದರು.
ನಂತರ ಡಾ. ಎ ವಿ ಬಾಳಿಗ ಸ್ಮಾರಕ ಆಸ್ಪತ್ರೆಯ ಮನೋವೈದ್ಯರಾದ ಡಾ. ಪಿ.ವಿ. ಭಂಡಾರಿ ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಮಾತನಾಡಿದರು. ಡಾ. ದೀಪಕ್ ಮಲ್ಯ ಮಾದಕ ವ್ಯಸನವನ್ನು ತಡೆಗಟ್ಟುವಲ್ಲಿ ಗೆಳೆಯರ ಪಾತ್ರ ಎಂಬ ವಿಷಯದ ಕುರಿತು ಮಾತನಾಡಿದರು.
120ಕ್ಕೂ ಹೆಚ್ಚಿನ ನರ್ಸಿಂಗ್ ವಿದ್ಯಾರ್ಥಿಗಳು, ಮನಶಾಸ್ತ್ರಜ್ಞ ವಿದ್ಯಾರ್ಥಿಗಳು ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು.